ಕೊರೊನಾ ತಡೆಗೆ ಜನತಾ ಕರ್ಫ್ಯೂ ಮೋದಿ ಕರೆಗೆ ದೇವೇಗೌಡರ ಬೆಂಬಲ! | Janata news
ಬೆಂಗಳೂರು : ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ಭಾನುವಾರ ದೇಶಾದ್ಯಂತ ಜನತಾ ಕರ್ಫ್ಯೂ ವನ್ನು ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿದ್ದು ಭಾರೀ ಬೆಂಬಲ ವ್ಯಕ್ತವಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರ ಜನತಾ ಕರ್ಫ್ಯೂ ಕರೆಗೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಬೆಂಬಲ ಸೂಚಿಸಿದ್ದಾರೆ.
ಮಹಾಮಾರಿ ಕೊರೋನಾ ವಿರುದ್ಧ ಹೋರಾಡಲು ಕೇಂದ್ರ ಸರ್ಕಾರ ಹಾಗೂ ದೇಶದ ಎಲ್ಲಾ ರಾಜ್ಯಗಳು ತೆಗೆದುಕೊಂಡಿರುವ ಉಪಕ್ರಮಗಳನ್ನು ನಾನು ಅಭಿನಂದಿಸುತ್ತೇನೆ. ಪ್ರಧಾನಿಯ ವಿನಂತಿ ಹಿಂದಿರುವ ಕಾಳಜಿ ಅರಿತುಕೊಂಡು ಸಂಯಮದಿಂದ ಎಲ್ಲರೂ ಸಹಕರಿಸಿ ಜನತಾ ಕರ್ಪ್ಯೂ ವನ್ನು ಎಲ್ಲರೂ ಯಶಸ್ವಿಗೊಳಿಸಬೇಕು, ಎಂದು ದೇಶದ ನಾಗರಿಕರಿಗೆ ಮಾಜಿ ಮನವಿ ಮಾಡಿದ್ದಾರೆ.
ಕೊರೋನಾ ಮಹಾಮಾರಿಯನ್ನು ದೇಶದ ಪ್ರತಿಯೊಬ್ಬ ಪ್ರಜೆಯೂ ಸ್ವಯಂ ಸಂಕಲ್ಪ ಹಾಗೂ ಸಂಯಮದಿಂದ ಎದುರಿಸಬೇಕೆಂಬ ಪ್ರಧಾನಿಯವರ ಮಾತು ಪಾಲನಯೋಗ್ಯವಾಗಿದ್ದು, ಮಾರ್ಚ್ 22 ಭಾನುವಾರದಂದು @narendramodi ಅವರು ಕರೆ ನೀಡಿರುವ 'ಜನತಾ ಕರ್ಫ್ಯೂ'ವನ್ನು ಬೆಂಬಲಿಸುವ ಮೂಲಕ ಸಾಮಾಜಿಕ ಕರ್ತವ್ಯವನ್ನು ಪಾಲಿಸೋಣ.@AmitShah @nsitharaman@drharshvardhan pic.twitter.com/GU42XiZk5g
— H D Devegowda (@H_D_Devegowda) March 20, 2020