ಲಾಕ್ ಡೌನ್ ನಿಯಮ ಗಾಳಿಗೆ ತೂರಿ ಹುಟ್ಟುಹಬ್ಬ ಆಚರಿಸಿದ ಬಿಜೆಪಿ ಶಾಸಕ: ಈಗ ಮೂವರ ವಿರುದ್ಧ ಎಫ್ಐಆರ್ | Janata news
ತುಮಕೂರು : ವೇಕೆರೆಯ ಬಿಜೆಪಿ ಶಾಸಕ ಜಯರಾಂ ತುಮಕೂರು ಜಿಲ್ಲೆಯ ಇಡಗೂರು ಗ್ರಾಮದ ಸರಕಾರಿ ಶಾಲೆಯೊಂದರಲ್ಲಿ ತಮ್ಮ ನೂರು ಮಂದಿ ಬೆಂಬಲಿಗರೊಂದಿಗೆ ತಮ್ಮ ಹುಟ್ಟುಹಬ್ಬವನ್ನು ಆಚರಿಸಿದ್ದಾರೆ.
ಲಾಕ್ಡೌನ್ ನಡುವೆ ಜನರನ್ನು ಸೇರಿಸಿ ಸುರಕ್ಷತಾ ಕ್ರಮಗಳನ್ನು ಅನುಸರಿಸದೇ ಗುಂಪು ಸೇರಿದ್ದ ಹಿನ್ನೆಲೆಯಲ್ಲಿ, ಮಸಾಲೆ ಜಯರಾಂ ಅವರ ಬೆಂಬಲಿಗರಾದ ಗುಬ್ಬಿ ತಾಲೂಕು ಇಡಗೂರಿನ ರವಿ, ರಾಜೇನಹಳ್ಳಿಯ ವಸಂತಕುಮಾರ್ ಹಾಗೂ ಹೊನ್ನೇಗೌಡರ ಮೇಲೆ ಎಫ್ಐಆರ್ ದಾಖಲಾಗಿದೆ.
ಹುಟ್ಟುಹಬ್ಬ ಆಚರಣೆ ವೇಳೆ ಸಾಮಾಜಿಕ ಅಂತರ ಕಾಪಾಡದೇ ನಿಯಮ ಉಲ್ಲಂಘಸಿ ಜನರ ಗುಂಪು ಸೇರಿಸಿದ್ದರು. ಹಲವಾರು ಜನರು ಹಾಗೂ ಮಕ್ಕಳು ಶಾಸಕ ಕೇಕ್ ಕತ್ತರಿಸುವಾಗ ಉಪಸ್ಥಿತರಿದ್ದರು. ಹುಟ್ಟುಹಬ್ಬ ನಿಮಿತ್ತ ಜನರಿಗೆ ಬಿರಿಯಾನಿ ಊಟ ಹಾಕಿಸಿದ್ದರು. ಹೀಗಾಗಿ ಕಾರ್ಯಕ್ರಮದಲ್ಲಿ 500ಕ್ಕೂ ಹೆಚ್ಚು ಜನರು ಸೇರಿದ್ದರು ಎನ್ನಲಾಗಿದೆ.