ನ್ಯಾಯಬೆಲೆ ಅಂಗಡಿಯಲ್ಲಿ ವಂಚನೆ: ಕ್ರಮಕ್ಕೆ ಸಿದ್ದರಾಮಯ್ಯ ಆಗ್ರಹ | Janata news
ಬೆಂಗಳೂರು : ಲಾಕ್ಡೌನ್ ಸಂದರ್ಭದಲ್ಲಿ ಬಡವರಿಗೆ ತೊಂದರೆಯಾಗಬಾರದು ಎಂದು ಎರಡು ತಿಂಗಳ ಪಡಿತರವನ್ನು ಒಟ್ಟಿಗೆ ನೀಡಲು ಸರ್ಕಾರ ನಿರ್ಧರಿಸಿದೆ. ನ್ಯಾಯ ಬೆಲೆ ಅಂಗಡಿಗಳಲ್ಲಿ ವಂಚನೆ ಪ್ರಕರಣಗಳ ದೂರುಗಳು ಕೇಳಿಬರುತ್ತಿದ್ದು, ಸರ್ಕಾರ ಕ್ರಮಕ್ಕೆ ಮುಂದಾಗಬೇಕು ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ರಾಜ್ಯದ ಪಡಿತರ ಅಂಗಡಿಗಳಲ್ಲಿ ಗೋಧಿ ಮತ್ತು ಸೀಮೆಎಣ್ಣೆ ನೀಡದೇ ಇದ್ದರೂ ಅವುಗಳನ್ನು ನೀಡಲಾಗಿದೆ ಎಂದು ಪಾವತಿ ರಶೀದಿಯಲ್ಲಿ ನಮೂದಿಸಿ ಬಳಕೆದಾರರಿಂದ ಸಹಿ ಹಾಕಿಸಿಕೊಳ್ಳುತ್ತಿರುವ ವಂಚನೆಯ ಪ್ರಕರಣಗಳ ಬಗ್ಗೆ ದೂರುಗಳು ಬರುತ್ತಿವೆ. ಮುಖ್ಯಮಂತ್ರಿಗಳು ಈ ಬಗ್ಗೆ ತಕ್ಷಣ ಗಮನಹರಿಸಿ ಕ್ರಮಕ್ಕೆ ಮುಂದಾಗಬೇಕು ಎಂದು ಒತ್ತಾಯಿಸಿದ್ದಾರೆ.
ರಾಜ್ಯದ ಪಡಿತರ ಅಂಗಡಿಗಳಲ್ಲಿ ಗೋಧಿ ಮತ್ತು ಸೀಮೆ ಎಣ್ಣೆ ನೀಡದೆ ಇದ್ದರೂ ಅವುಗಳನ್ನು ನೀಡಲಾಗಿದೆ ಎಂದು ಪಾವತಿ ರಶೀದಿಯಲ್ಲಿ ನಮೂದಿಸಿ ಬಳಕೆದಾರರಿಂದ ಸಹಿ ಹಾಕಿಸಿಕೊಳ್ಳುತ್ತಿರುವ ವಂಚನೆಯ ಪ್ರಕರಣಗಳ ಬಗ್ಗೆ ದೂರುಗಳು ಬರುತ್ತಿವೆ. @CMofKarnataka ತಕ್ಷಣ ಗಮನಹರಿಸಿ ಕ್ರಮಕ್ಕೆ ಮುಂದಾಗಬೇಕು. pic.twitter.com/nIlnL67q1X
— Siddaramaiah (@siddaramaiah) April 12, 2020