ಜಮ್ಮು ಕಾಶ್ಮೀರದಲ್ಲಿ ಮೂರು ಎನ್ಕೌಂಟರ್, 15 ದಿನಗಳಲ್ಲಿ ಉಗ್ರ ಸಂಘಟನೆಯ 8 ಟಾಪ್ ಕಮಾಂಡರ್ ಸೇರಿ 22 ಭಯೋತ್ಪಾದಕರ ಬಲಿ! | Janata news
ಜಮ್ಮು ಕಾಶ್ಮೀರ : ಭದ್ರತಾ ಪಡೆ ಮತ್ತು ಭಯೋತ್ಪಾದಕರ ನಡುವಿನ ಗುಂಡಿನ ಚಕಮಕಿಯಲ್ಲಿ, ಶೋಫಿಯಾನಾ ಭಾಗದಲ್ಲಿ ಇಂದು ಮುಂಜಾನೆ ನಡೆದ ಸೇನಾ ಕಾರ್ಯಾಚರಣೆಯಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಲಾಗಿದೆ.
ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್), ರಾಷ್ಟ್ರೀಯ ರೈಫಲ್ಸ್ ಹಾಗೂ ವಿಶೇಷ ಕಾರ್ಯಾಚರಣೆ ತಂಡ ಶೋಫಿಯಾನಾ ಭಾಗದಲ್ಲಿ ಕಾರ್ಯಾಚರಣೆಗೆ ಇಳಿದಿತ್ತು.
ಸೋಪಿಯಾನ್ ಜಿಲ್ಲೆಯ ಸುಗೂ ಗ್ರಾಮದ ಮನೆಯೊಂದರಲ್ಲಿ ಉಗ್ರಗಾಮಿಗಳು ಅವಿತಿಟ್ಟುಕೊಂಡು ದಾಳಿಗೆ ಸಜ್ಜಾಗಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಭಾರತೀಯ ಸೇನೆ, ಸಿಆರ್ಪಿಎಫ್ ಮತ್ತು ಪೊಲೀಸರು ನಿನ್ನೆ ರಾತ್ರಿಯಿಂದಲೇ ಆ ಪ್ರದೇಶವನ್ನು ಸುತ್ತುವರಿದು ಬೇಟೆ ಕಾರ್ಯಾಚರಣೆ ನಡೆಸುತ್ತಿದ್ದರು.
ಇದೇ ಸಂದರ್ಭದಲ್ಲಿ ಉಗ್ರರು ಯೋಧರ ಮೇಲೆ ಗುಂಡು ಹಾರಿಸಿದಾಗ ಭದ್ರತಾ ಪಡೆಗಳೂ ಪ್ರತಿದಾಳಿ ನಡೆಸಿದವು. ಆಗ ನಡೆದ ಸುದೀರ್ಘ ಎನ್ಕೌಂಟರ್ನಲ್ಲಿ ಮೂವರು ಉಗ್ರರು ಹತರಾದರು.
ಕಳೆದ 15 ದಿನಗಳಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರ ಸಂಘಟನೆಗಳ 8 ಮಂದಿ ಉನ್ನತ ಕಮಾಂಡರ್ಗಳು ಸೇರಿದಂತೆ 22 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಸೇನಾ ಮೂಲಗಳು ತಿಳಿಸಿವೆ.
ಮೇ.25 ರಂದು ನಡೆದ ಕಾರ್ಯಾಚರಣೆಯಲ್ಲಿ ಇಸ್ಲಾಮಿಕ್ ಸ್ಟೇಟ್ ಕಮಾಂಡರ್ ಆದಿಲ್ ಅಹ್ಮದ್ ವಾನಿ ಹಾಗೂ ಎಲ್ ಇಟಿ ಮುಖ್ಯಸ್ಥ ಶಾಹೀನ್ ಅಹ್ಮದ್ ಥೊಕೆರ್ ಎಂಬುವವನ್ನು ಹತ್ಯೆ ಮಾಡಲಾಗಿತ್ತು.
ಇದಾಗ ಬಳಿಕ ಕುಲ್ಗಾಂನಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ನ ಕಮಾಂಡರ್ ಪರ್ವೈಜ್ ಅಹ್ಮದ್ ಪಂಡಿತ್ ಹಾಗೂ ಜೆಇಎ ಕಮಾಂಡರ್ ಶಾಕಿರ್ ಅಹ್ಮತ್ ಇಟೂನನ್ನು ಹತ್ಯೆ ಮಾಡಲಾಗಿತ್ತು.
ಜೂನ್. 2 ರಂದು ಅವಂತಿಪೊರಾದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಜೆಇಎಂ ಸಂಘಟನೆಯ ಮತ್ತೊಬ್ಬ ಕಮಾಂಡರ್ ಆಖಿಬ್ ರಂಜಾನ್ ಹಾಗೂ ಮೊಹಮ್ಮದ್ ಮಖ್ಬೂಲ್ ಚೋಪಾನನ್ನು ಹತ್ಯೆ ಮಾಡಲಾಗಿತ್ತು.
ಜೂನ್. 2 ರಂದು ಮತ್ತೊಂದು ಕಾರ್ಯಾಚರಣೆಯಲ್ಲಿ ಜೆಇಎಂ ಟಾಪ್ ಕಮಾಂಡರ್ ಎಂದೇ ಹೇಳಲಾಗುತ್ತಿದ್ದ ಫೌಝಿ ಭಾಯ್, ಮಂಝೂರ್ ಅಹ್ಮದ್ ಕಾರ್, ಜವೈದ್ ಅಹ್ಮದ್ ಝರ್ಗಾ ನನ್ನು ಹತ್ಯೆ ಮಾಡಲಾಗಿತ್ತು.
ಜೂನ್ 7 ರಂದು ಶೋಪಿಯಾನ್ ನಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಟಾಪ್ ಕಮಾಂಡರ್ ಇಶ್ಫಾಕ್ ಅಹ್ಮದ್ ಇತೂ, ಓವೈಸಿ ಅಹ್ಮದ್ ಮಲಿಕ್, ಆದಿಲ್ ಅಹ್ಮದ್ ಮಿರ್, ಬಿಲಾರ್ ಅಹ್ಮದ್ ಭಟ್, ಸಾಜದ್ ಅಹ್ಮದ್ ವಾಗಯ್ ನನ್ನು ಹತ್ಯೆ ಮಾಡಲಾಗಿತ್ತು.
ಇದೇ ಜೂನ್. 7 ರಂದು ನಡೆದ ಎರಡನೇ ಎನ್ ಕೌಂಟರ್ ನಲ್ಲಿ ಉಮರ್ ಮೊಹುಯುದ್ದೀನ್ ದೋಬಿ, ಎಲ್ಇಟಿ ಟಾಪ್ ಕಮಾಂಡರ್ ರಯೀಸ್ ಅಹ್ಮದ್ ಖಾನ್, ಹಿಜ್ಬುಲ್ ಮುಜಾಹಿದ್ದೀನ್ ಸಕ್ಲೈನ್ ಅಹ್ಮ್ ವಾಗಾಯ್, ವಕೀಲ್ ಅಹ್ಮದ್ ನಾಯ್ಕೂ ನನ್ನು ಹತ್ಯೆ ಮಾಡಲಾಗಿತ್ತು.