ಜುಲೈ 1 ರವರೆಗೆ ಕನಕಪುರದಲ್ಲಿ ಸ್ವಯಂ ಲಾಕ್ ಡೌನ್! | Janata news
ರಾಮನಗರ: : ಕನಕಪುರದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ತಿಂಗಳಾಂತ್ಯದವರೆಗೆ ಇಡೀ ಕನಕಪುರ ತಾಲ್ಲೂಕು ಸ್ವಯಂ ಲಾಕ್ಡೌನ್ ಆಗಲಿದೆ.
ನಗರಸಭೆ ವತಿಯಿಂದ ಆಯೋಜಿಸಲಾಗಿದ್ದ ಸಭೆಯಲ್ಲಿ ಶಾಸಕ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಂಸದ ಡಿ.ಕೆ.ಸುರೇಶ್ ಅವರ ಸಮ್ಮುಖದಲ್ಲಿ ಕನಕಪುರ ನಗರದ ವ್ಯಾಪಾರಿ ಮಳಿಗೆಗಳ ಮಾಲೀಕರು ಮತ್ತು ವಿವಿಧ ಸಂಘ-ಸಂಸ್ಥೆಗಳು ತಮ್ಮ ಈ ನಿರ್ಧಾರವನ್ನು ಪ್ರಕಟಿಸಿದರು.
ಕೊರೊನಾ ಪ್ರಕರಣ ಹೆಚ್ಚಾದ ಹಿನ್ನೆಲೆಯಲ್ಲಿ ಕನಕಪುರವನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಬೆಳಗ್ಗೆ 7 ಗಂಟೆಯಿಂದ 11 ಗಂಟೆಯವರೆಗೆ ಮಾತ್ರ ಅಗತ್ಯ ವಸ್ತುಗಳನ್ನು ಖರೀದಿ ಮಾಡಲು ಅವಕಾಶ ನೀಡಲಾಗಿದೆ.
11 ಗಂಟೆಯ ನಂತರ ಕನಕಪುರ ಸಂಪೂರ್ಣ ಲಾಕ್ಡೌನ್ ಆಗಲಿದೆ. ಲಾಕ್ಡೌನ್ ಆಗಿದ್ದ ವೇಳೆ ಜನರು ಓಡಾಟ ಕೂಡ ಮಾಡುವಂತಿಲ್ಲ. ಆದರೆ ಎಲ್ಲ ಬಗೆಯ ವರ್ತಕರು ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು ಹಾಗೂ ವ್ಯಾಪಾರ ಸ್ಥಳದಲ್ಲಿ ಸ್ಯಾನಿಟೈಸರ್ ವ್ಯವಸ್ಥೆ ಮಾಡಬೇಕು.
ಈ ಲೌಕ್ ಡೌನ್ ಗೂ ರಾಜ್ಯ ಸರಕಾರದ ಆದೇಶವಲ್ಲ. ಕನಕಪುರ ಜನತೆ ಮುನ್ನೆಚ್ಚರಿಕೆ ಕ್ರಮವಾಗಿ ತೆಗೆದುಕೊಂಡಿರುವ ಪ್ರಜ್ಞಾಪೂರ್ವಕ ಸ್ವಂತ ನಿರ್ಣಯ. ಜೀವವಿದ್ದರೆ ಜೀವನ ಎಂಬ ನಂಬುಗೆಯ ಆಧಾರದಲ್ಲಿ ಕೈಗೊಂಡಿರುವ ಮಾದರಿ ನಿರ್ಧಾರ. ಅದಕ್ಕಾಗಿ ಅವರನ್ನು ನಾನು ಅಭಿನಂದಿಸುತ್ತೇನೆ.
ಈ ಸ್ವಯಂ ಪ್ರೇರಿತ ಲಾಕ್ ಡೌನ್ ಸಂದರ್ಭದಲ್ಲಿ ಅನಗತ್ಯ ಓಡಾಟ ವಾಹನ ಸಙಚಾರಕ್ಕೆ ಕಡಿವಾಣ ಹಾಕಿಕೊಳ್ಳಬೇಕು. ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಯಾರೂ ಯಾರ ಮೇಲೂ ದಬ್ಬಾಳಿಕೆ ಮಾಡಬಾರದು ಎಂದರು.