ಕೊರೊನಾ ಭಯದಲ್ಲಿ ಯುವಕ ನೇಣಿಗೆ ಶರಣು, ಬಳಿಕ ಬಂದ ಪರೀಕ್ಷಾ ವರದಿ ನೆಗೆಟಿವ್! | Janata news
ಬೀದರ್ : ತನಗೆ ಕೊರೋನಾವೈರಸ್ ಸೋಂಕು ತಗುಲಿದೆ ಎಂದು ಭಯಗೊಂಡ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೀದರ್ ನ ಬಸವ ಕಲ್ಯಾಣ ತಾಲೂಕಿನಲ್ಲಿ ನಡೆದಿದೆ.
ಬಸವ ಕಾಲ್ಯಾಣದ ತ್ರಿಪುರಾಂತ್ ಎಂಬಲ್ಲಿ ನಡೆದ ಘಟನೆಯಲ್ಲಿ ಅಶ್ವಿನ್ ಮೆಟ್ರೆ (26) ಎಂಬ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಆತ ಮಹಾರಾಷ್ಟ್ರದ ವ್ಯಕ್ತಿಯೊಬ್ಬನೊಂದಿಗೆ ಸಂಪರ್ಕ ಬಂದಿದ್ದನಂತೆ. ಆತನಿಗೆ ಕೊರೊನಾ ಪರೀಕ್ಷೆ ಮಾಡಲಾಗಿತ್ತು. ಗಂಟಲಿನ ಸ್ವ್ಯಾಬ್ ಮಾದರಿಯನ್ನು ಪರೀಕ್ಷೆಗೆ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಆದರೆ, ವರದಿ ಕೈಗೆ ಬರುವ ಮುನ್ನವೇ ತನಗೆ ಕೊರೊನಾ ಇದೆ ಎಂದು ಭಯಗೊಂಡ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ.
ಆತ್ಮಹತ್ಯೆ ಮಾಡಿಕೊಂಡ ಬಳಿಕ ಆತನ ವರದಿ ಬಂದಿದ್ದು ಯುವಕನಿಗೆ ಕೊರೋನಾ ಸೋಂಕು ಇಲ್ಲವೆಂದು ಆರೋಗ್ಯ ಇಲಾಖೆಯ ಮೂಲಗಳು ಖಚಿತಪಡಿಸಿವೆ.