ನಾಳೆಯಿಂದ SSLC ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿನಿಗೆ ಕೊರೊನಾ ಪಾಸಿಟೀವ್! | Janata news
ಕೋಲಾರ : ಜೂನ್ 25 ರಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭವಾಗಲಿರುವ ಹಿನ್ನೆಲೆಯಲ್ಲಿ ನಾಳೆ ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿನಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
ಕೋಲಾರ ಜಿಲ್ಲೆಯ ಕೆಜಿಎಫ್ ಬಾಲಮಂದಿರದಲ್ಲಿದ್ದ ವಿದ್ಯಾರ್ಥಿನಿಗೆ ಸೋಂಕು ತಗಲಿದೆ. ಇನ್ನು ಈಕೆಯನ್ನು ಬಾಲ್ಯ ವಿವಾಹದ ಅರೋಪದಡಿ ಕಳೆದ ಶನಿವಾರ ಬಾಲ ಮಂದಿರದಲ್ಲಿ ಇಡಲಾಗಿತ್ತು.
ಈ ವೇಳೆ ಬಾಲಕಿಯ ಗಂಟಲು ದ್ರವ ಮಾದರಿ ಟೆಸ್ಟ್ ಮಾಡಲಾಗಿತ್ತು. ಜೊತೆಗೆ ನಾಳೆ ಎಸ್ಎಸ್ಎಲ್ಸಿ ಪರೀಕ್ಷೆ ಇದ್ದ ಹಿನ್ನೆಲೆ ಬಾಲಕಿಯ ಪೋಷಕರು ಬಾಲ ಮಂದಿರದಿಂದ ಆಕೆಯನ್ನ ಮನೆಗೆ ವಾಪಸ್ ಕರೆದುಕೊಂಡು ಹೋಗಿದ್ದರು ಎನ್ನಲಾಗಿದೆ. ಇಂದು ಬಂದ ಲ್ಯಾಬ್ ವರದಿಯಲ್ಲಿ ಬಾಲಕಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.
ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆ ಬರೆಯುವುದಕ್ಕೆ ತಡೆ ನೀಡಲಾಗಿದೆ. ಪೂರಕ ಪರೀಕ್ಷೆಯಲ್ಲಿ ಅವಕಾಶ ನೀಡುವುದಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಮಾಹಿತಿ ನೀಡಿದ್ದಾರೆ.