ಮಾಸ್ಕ್ ಧರಿಸದೇ ಕಾರ್ಯಕ್ರಮದಲ್ಲಿ ಸುಮಲತಾ ಭಾಗಿ: ಸಂಪರ್ಕದಲ್ಲಿದ್ದವರಿಗೆ ಆತಂಕ ಶುರು | Janata news
ಮಂಡ್ಯ: : ಸಂಸದೆ ಸುಮಲತಾ ಅಂಬರೀಶ್ ಅವರು ತಮಗೆ ಕರೊನಾ ಸೋಂಕು ತಗುಲಿರುವ ಬಗ್ಗೆ ನಿನ್ನೆಯಷ್ಟೇ ದೃಢಪಡಿಸಿದ್ದರು. ಇದೀಗ ಅನೇಕ ಸಚಿವರು, ಶಾಸಕರು ಸೇರಿದಂತೆ ಅನೇಕ ಗಣ್ಯರಿಗೆ ಆತಂಕ ಎದುರಾಗಿದೆ.
ಕಳೆದೊಂದು ವಾರದಲ್ಲಿ ಮಂಡ್ಯ ಜಿಲ್ಲೆಯ ಹಲವೆಡೆಗೆ ಸುಮಲತಾ ಅವರು ಭೇಟಿ ಕೊಟ್ಟಿದ್ದರು. ಈ ವೇಳೆ ಅವರಿಗೆ ಅಧಿಕಾರಿಗಳು ಹಾಗೂ ಬೆಂಬಲಿಗರು ಸಾಥ್ ನೀಡಿದ್ದರು ಎನ್ನಲಾಗಿದೆ.
ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹ ಧನದ ಚೆಕ್ ವಿತರಣೆ ಕಾರ್ಯಕ್ರಮ ಅದಾಗಿತ್ತು. ಈ ಕಾರ್ಯಕ್ರಮದಲ್ಲಿ ಸಚಿವರಾದ ಎಸ್.ಟಿ.ಸೋಮಶೇಖರ್, ಕೆ.ಸಿ.ನಾರಾಯಣಗೌಡ, ಶಾಸಕ ಎಂ.ಶ್ರೀನಿವಾಸ್, ಮಂಡ್ಯ ಡಿಸಿ ಸೇರಿ ಹಲವರು ಗಣ್ಯರು ಉಪಸ್ಥಿತರಿದ್ದರು.
ಅದರ ವಿಡಿಯೋ ಇದೀಗ ವೈರಲ್ ಆಗಿದ್ದು, ಸುಮಲತಾ ಅವರು ಮಾಸ್ಕ್ ಧರಿಸದೇ ಕಾರ್ಯಕ್ರಮದಲ್ಲಿ ಭಾಗವಹಿಸಿರುವುದು ಕಂಡುಬಂದಿದೆ.
ಸುಮಲತಾ ಅಂಬರೀಶ್ ಅವರು ಜುಲೈ 5ರಂದು, ಬೆಳಗ್ಗೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮಂಡ್ಯ ಜಿಲ್ಲೆಯಲ್ಲಿ ಕೋವಿಡ್ -19 ನಿಯಂತ್ರಣ ಮತ್ತು ಜಿಲ್ಲೆಗೆ ಮರಳುತ್ತಿರುವ ಕಾರ್ಮಿಕರು ಮತ್ತು ನಿವಾಸಿಗಳಿಗೆ ಸಮರ್ಪಕ ಸ್ಕ್ರೀನಿಂಗ್ ವ್ಯವಸ್ಥೆ ಮತ್ತು ಕ್ವಾರಂಟೈನ್ ಶಿಬಿರಗಳ ನಿರ್ಮಾಣ ಕುರಿತಂತೆ ಚರ್ಚೆ ನಡೆಸಿದ್ದರು ಎನ್ನಲಾಗಿದೆ.
ಈ ಭೇಟಿಯ ಬಳಿಕ ಸಿಎಂ ಜೊತೆಗೆ ಪೋಟೋ ತೆಗೆಸಿಕೊಂಡಿದ್ದಂತ ಸಂಸದೆ ಸುಮಲತಾ ಅಂಬರೀಶ್, ಮಾಸ್ಕ್ ಧರಿಸಿರಲಿಲ್ಲ. ಹೀಗಾಗಿ ಸಂಸದೆ ಸುಮಲತಾ ಅಂಬರೀಶ್ ಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಡಿಸಿದ ನಂತ್ರ, ಸಿಎಂ ಯಡಿಯೂರಪ್ಪಗೂ ಕೊರೋನಾ ಸೋಂಕಿನ ಭೀತಿ ಎದುರಾಗಿದೆ ಎನ್ನಲಾಗಿದೆ.