ಆಧುನಿಕ ಭಗೀರಥ, ಮಂಡ್ಯದ ಕಾಮೇಗೌಡರು ಆಸ್ಪತ್ರೆಗೆ ದಾಖಲು! | Janata news
ಮಂಡ್ಯ : ಆಧುನಿಕ ಭಗೀರಥ ಎಂದು ಖ್ಯಾತಿ ಪಡೆದಿರುವ ಕೆರೆ ಕಾಮೇಗೌಡ ಅವರು, ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕಾಮೇಗೌಡರ ಕಾಲಿಗೆ ತೀವ್ರವಾದ ಗಾಯವಾಗಿದೆ. ಹೀಗಾಗಿ ಜಿಲ್ಲೆಯ ಮಳವಳ್ಳಿ ತಾಲೂಕಾಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾಮೇಗೌಡರ ಎರಡು ಕಾಲುಗಳು ತೀವ್ರವಾಗಿ ಊತಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಗುರುವಾರ ಸಂಜೆ ಕಾಮೇಗೌಡರು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕೆರೆಗಳ ಮನುಷ್ಯ ಎಂದೇ ಖ್ಯಾತಿಯ ಕೆರೆ ಕಾಮೇಗೌಡ, ನರ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದರು. ಸಮಸ್ಯೆ ಇತ್ತೀಚೆಗೆ ಹೆಚ್ಚಾಗಿದ್ದರಿಂದಾಗಿ, ಮಳವಳ್ಳಿಯ ತಾಲೂಕು ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದಾರೆ.
ಇತ್ತೀಚೆಗೆ ಪ್ರಧಾನಿ ಮೋದಿ ಇಂದಿನ ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಪರಿಸರ ಪ್ರೇಮಿ, ರಾಜ್ಯೋತ್ಸವ ಪುರಷ್ಕೃತ ಕಾಮೇಗೌಡ ಅವರನ್ನು ಶ್ಲಾಘಿಸಿದ್ದರು.
ಈ ಬಳಿಕ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಕೂಡ ಕೆರೆ ಕಾಮೇಗೌಡ ಅವರ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದ್ದರು. ಅಲ್ಲದೇ ಅವರ ಕಾರ್ಯಕ್ಕಾಗಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೂಚನೆ ನೀಡಿ ಉಚಿತವಾಗಿ ಬಸ್ ಪಾಸ್ ವ್ಯವಸ್ಥೆ ಮಾಡಲು ತಿಳಿಸಿದ್ದರು. ಸಿಎಂ ನಿರ್ದೇಶನದಿಂದಾಗಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಜೀವಿತಾವಧಿಯವರೆಗೂ ಉಚಿತವಾಗಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಎಲ್ಲಾ ಬಸ್ ಗಳಲ್ಲಿಯೂ ಪ್ರಯಾಣಿಸುವ ಪಾಸ್ ವಿತರಿಸಲಾಗಿತ್ತು.
ಜಿಲ್ಲಾಡಳಿತ ಕೂಡ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ನೇತೃತ್ವದಲ್ಲಿ ಗೌರವ ಸಲ್ಲಿಸುವುದರ ಜೊತೆಗೆ ಕಾಮೇಗೌಡರ ಬೇಡಿಕೆಯಂತೆಯೇ, ಅವರ ಮಗನಿಗೆ ಉದ್ಯೋಗ, ಮನೆ ಕಟ್ಟಿಸಿಕೊಡುವುದು ಹಾಗೂ ಪಿಂಚಣಿ ಸೌಲಭ್ಯವನ್ನು ಕಲ್ಪಿಸಿಕೊಡುವುದಾಗಿ ಘೋಷಿಸಲಾಗಿತ್ತು.
ಕೆರೆ ನಿರ್ಮಾಣದ ಕಾಮೇಗೌಡರು ಬೇಗಗುಣಮುಖರಾಗಲಿ ಅನ್ನೋದು ಎಲ್ಲರ ಹಾರೈಕೆಯಾಗಿದೆ.