ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರಿಗೆ ಕೋವಿಡ್-19 ಸೋಂಕು ದೃಢ | Janata news
ಮಂಗಳೂರು : ಮಂಗಳೂರು ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರಿಗೆ ಇಂದು ಕೋವಿಡ್-19 ಸೋಂಕು ದೃಢಪಟ್ಟಿದೆ.
ಮನಪಾ ಆಯುಕ್ತರಿಗೆ ಎರಡು ದಿನಗಳ ಹಿಂದೆ ಜ್ವರದ ಲಕ್ಷಣಗಳು ಕಂಡುಬಂದಿದ್ದವು. ಈ ಕಾರಣದಿಂದ ಅವರು ಕೋವಿಡ್ ಪರೀಕ್ಷೆಗೆ ಒಳಗಾಗಿದ್ದರು. ಇಂದು ಅವರ ಗಂಟಲು ದ್ರವ ಪರೀಕ್ಷಾ ವರದಿ ಬಂದಿದ್ದು, ಕೋವಿಡ್ ಪಾಸಿಟಿವ್ ದೃಢವಾಗಿದೆ.
ಕೊರೋನ ಪಾಸಿಟಿವ್ ಇರುವುದು ಕಂಡುಬಂದ ಹಿನ್ನೆಲೆಯಲ್ಲಿ ಅವರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಪರಿಸ್ಥಿತಿ ದಿನೇ ದಿನೇ ಕೈ ಮೀರುತ್ತಿದೆ. ಬೆಂಗಳೂರಿನಂತೆ ಇಲ್ಲೂ ಲಾಕ್ ಡೌನ್ ಮಾಡಿ.ಇನ್ನಷ್ಟು ಆರೋಗ್ಯ ಹಾಗೂ ವೈದ್ಯಕೀಯ ಮೂಲ ಸೌಕರ್ಯ ಸಿದ್ದತೆ ಮಾಡಿ,ಸೂಕ್ತ ಸಮಯ ನೋಡಿ ಪೂರಕ ಯೋಜನೆಯ ಅನುಷ್ಠಾನ ಮಾದರಿ ಸಿದ್ದಪಡಿದ ಬಳಿಕವಷ್ಟೇ ಲಾಕ್ ಡೌನ್ ಹಂತ ಹಂತವಾಗಿ ತೆರವುಗೊಳಿಸಿ.ಇದು ನನ್ನ ವಿನಯ ಪೂರ್ವಕ ಮನವಿ ಎಂದು ಟ್ವೀಟ್ ಮೂಲಕ ಶಾಸಕ ಖಾದರ್ ಸಿಎಂಗೆ ಮನವಿ ಮಾಡಿದ್ದಾರೆ.