ಕೊರೊನಾ ಸೋಂಕಿತರನ್ನ ಅಪರಾಧಿಗಳಂತೆ ಕಾಣುವುದು, ನಿಂದನೆ ಮಾಡೋದು ಸರಿಯಲ್ಲ: ಸುಮಲತಾ ಅಂಬರೀಶ್ | Janata news
ಬೆಂಗಳೂರು : ಕೊರೊನಾ ಸೋಂಕಿತರನ್ನ ಅಪರಾಧಿಗಳಂತೆ ಕಾಣುವುದು, ನಿಂದಿಸುವುದನ್ನು ಮಾಡಬೇಡಿ. ಇದೊಂದು ರೀತಿಯ ಯುದ್ಧ ಎಲ್ಲರೂ ಒಟ್ಟಾಗಿ ಹೋರಾಡಬೇಕು ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದೆ ಸುಮಲತಾ ಅಂಬರೀಶ್ ಅವರು ಹೇಳಿದ್ದಾರೆ.
ಸಂಸದೆ ಸುಮಲತಾ ಅಂಬರೀಶ್ ಅವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ಸುಮಲತಾ ಅವರು ಕೊರೊನಾದಿಂದ ಗುಣಮುಖರಾಗಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿತ್ತು. ಇದೀಗ ಬಗ್ಗೆ ಸ್ವತಃ ಸುಮಲತಾ ಅವರೇ ಸ್ಪಷ್ಟನೆ ಕೊಟ್ಟಿದ್ದಾರೆ.
ನಾನು ಕೊರೊನಾದಿಂದ ಗುಣಮುಖ ಆಗಿದ್ದೇನೆ ಎನ್ನುವ ಒಂದು ಸುದ್ದಿ ಹರಿದಾಡುತ್ತಿದೆ. ಆದರೆ, ನಾನು ಸಂಪೂರ್ಣವಾಗಿ ಗುಣಮುಖವಾಗಿರುವುದು, ಕ್ವಾರಂಟೈನ್ ಅವಧಿ ಮುಗಿದು, ಪರೀಕ್ಷೆಯ ಬಳಿಕವೇ ತಿಳಿಯುವುದು. ಸದ್ಯಕ್ಕೆ ಔಷಧಿ ಹಾಗೂ ಸುಶ್ರುಷೆ ಮುಂದುವರೆದಿದೆ. ನಾನು ಗುಣಮುಖ ಆಗಲೆಂದು ನೀವೆಲ್ಲರೂ ಮಾಡಿದ ಆಶೀರ್ವಾದ, ಹಾರೈಕೆಗಳಿಗೆ ಋಣಿ. ಇನ್ನು ಕೆಲವೇ ದಿನಗಳಲ್ಲಿ ಗುಣಮುಖ ಆಗುವ ಭರವಸೆ ಇದೆ ಎಂದು ಹೇಳಿದ್ದಾರೆ.
ಕೊರೊನಾ ಸೋಂಕಿತರನ್ನ ಅಪರಾಧಿಗಳ ರೀತಿ ಕಾಣುವುದು, ಸಾಮಾಜದ ನಿಂದನೆಗೆ ಗುರಿ ಮಾಡುವುದು ಸರಿಯಲ್ಲ. ಇದು ಒಂದು ಯುದ್ಧ, ಕರೋನಾ ವಿರುದ್ಧ ಎಲ್ಲರೂ ಒಟ್ಟಾಗಿ ಹೋರಾಡಬೇಕಿದೆ. ಮುಖ್ಯವಾಗಿ, ಸೊಂಕಿತರು ಕ್ವಾರಂಟೈನ್ ಅವಧಿಯನ್ನು ಮತ್ತು ಸರ್ಕಾರದ ಎಲ್ಲಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಅತ್ಯಗತ್ಯ ಹಾಗೂ ಅದು ನಮ್ಮ ಜವಾಬ್ದಾರಿ. ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ತಪ್ಪದೆ ಮುಖಕ್ಕೆ ಮಾಸ್ಕ ಧರಿಸುವುದನ್ನ ಮರಿಯಬೇಡಿ. ಎಂದು ಸಾಮಾಜಿಕ ಜಾಲತಾಣಲ್ಲಿ ಬರೆದುಕೊಂಡಿದ್ದಾರೆ.
ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ತಪ್ಪದೆ ಮುಖಕ್ಕೆ ಮಾಸ್ಕ್ ಧರಿಸುವುದನ್ನ ಮರಿಯಬೇಡಿ ಎಂದು ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ.