ತಮ್ಮನಿಗೆ ಕರೊನಾ ಸೋಂಕು ದೃಢ, ಅಣ್ಣ ನೇಣಿಗೆ ಶರಣಾದ! | Janata news
ಕೋಲಾರ: : ತಮ್ಮನಿಗೆ ಕರೊನಾ ಸೋಂಕು ತಗುಲಿದ್ದರಿಂದ ಆಘಾತಗೊಂಡು ಅಣ್ಣನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರದ ಗಾಂಧಿನಗರದಲ್ಲಿ ಶನಿವಾರ ರಾತ್ರಿ ನಡೆದಿದೆ.
ನಾಗರಾಜ್ (37) ಮೃತ ದುರ್ದೈವಿ. ನಿನ್ನೆ ಸಂಜೆ ತಮ್ಮನಿಗೆ ಸೋಂಕು ದೃಢವಾದ ಹಿನ್ನೆಲೆಯಲ್ಲಿ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಮೃತ ನಾಗರಾಜ್ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದನು. ಆದರೆ ನಾಗರಾಜ್ ಸಹೋದರನಿಗೆ ಶನಿವಾರ ಸಂಜೆ ಕೊರೊನಾ ದೃಢವಾಗಿದ್ದು, ನಂತರ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದನು. ಕೂಲಿ ಕೆಲಸ ಮುಗಿಸಿಕೊಂಡು ಮನೆಗೆ ಬಂದ ನಾಗರಾಜ್ಗೆ ತಮ್ಮನಿಗೆ ಕೊರೊನಾ ಬಂದಿರುವ ವಿಚಾರ ತಿಳಿದಿದೆ. ನಂತರ ರಾತ್ರಿಯೇ ನಾಗರಾಜ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
English summary :Kolar