ಬಿಜೆಪಿ ರಾಜ್ಯಸಭೆ ಸದಸ್ಯರಾಗಿ ಜ್ಯೋತಿರಾದಿತ್ಯ ಸಿಂದಿಯಾ ಪ್ರಮಾಣ ವಚನ ಸ್ವೀಕಾರ | Janata news
ನವದೆಹಲಿ : ಮಧ್ಯಪ್ರದೇಶದಿಂದ ರಾಜ್ಯಸಭೆಗೆ ಆಯ್ಕೆಯಾದ ಬಿಜೆಪಿ ಮುಖಂಡ ಜ್ಯೋತಿರಾದಿತ್ಯ ಸಿಂದಿಯಾ ಅವರು ಇಂದು ರಾಜ್ಯಸಭೆ ಸದಸ್ಯರಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದರು.
ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಅವರು ಸಿಂದಿಯಾ ಅವರಿಗೆ ಪ್ರಮಾಣ ವಚನ ಭೋದಿಸಿದರು. ಮಧ್ಯಪ್ರದೇಶದಿಂದ ಬಿಜೆಪಿಯ ಮುಖಂಡ ಡಾ.ಸುಮೇರ ಸೋಲಂಕಿ ಅವರು ಸಹ ಇದೆ ಸಂದರ್ಭದಲ್ಲಿ ರಾಜ್ಯಸಭೆ ಸದಸ್ಯರಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಪ್ರಮಾಣ ವಚನಕ್ಕೂ ಮೊದಲು ಜ್ಯೋತಿರಾದಿತ್ಯ ಸಿಂದಿಯಾ ಅವರು ರಾಜ್ಯಸಭಾ ಸದಸ್ಯರು ಹಾಗೂ ತಮ್ಮ ಹಳೆಯ ಪಕ್ಷ ಕಾಂಗ್ರೆಸ್ ಮುಖಂಡರುಗಳಾದ ಮಲ್ಲಿಕಾರ್ಜುನ ಖರ್ಗೆ, ಗುಲಾಮ್ ನಬಿ ಅಜಾದ್ ಹಾಗೂ ದಿಗ್ವಿಜಯ್ ಸಿಂಗ್ ಅವರ ಬಳಿಗೆ ತೆರಳಿ ಶುಭಾಶಯ ಕೋರಿದರು.
English summary :Jyotiraditya Scindia taking oath as BJP Rajya Sabha member