ಕೃಷಿ ಸಚಿವ ಬಿ.ಸಿ.ಪಾಟೀಲ್ಗೆ ಕೊರೋನಾ ಪಾಸಿಟಿವ್! | Janata news
ಬೆಂಗಳೂರು : ಕೃಷಿ ಸಚಿವ ಬಿ.ಸಿ.ಪಾಟೀಲ್ಗೂ ಕೂಡ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ.
ಇಲ್ಲಿಯವರೆಗೆ ರಾಜ್ಯದ ಮೂವರು ಸಚಿವರಿಗೆ ಕೊರೋನಾ ಸೋಂಕು ತಗುಲಿದೆ. ಪ್ರವಾಸೋದ್ಯಮ ಸಚಿವ ಸಿಟಿ ರವಿ, ಅರಣ್ಯ ಸಚಿವ ಆನಂದ್ ಸಿಂಗ್ ಇದೀಗ ಕೃಷಿ ಸಚಿವ ಬಿ ಸಿ ಪಾಟೀಲ್ಗೂ ಕೊರೋನಾ ಇರುವುದು ದೃಢಪಟ್ಟಿದೆ.
ಈ ಬಗ್ಗೆ ಸ್ಪತಃ ಸಚಿವ ಬಿಸಿ ಪಾಟೀಲ್ ಅವರೇ ಟ್ವೀಟ್ ಮಾಡಿದ್ದು, ಇದೀಗ ಬಂದ ವರದಿಯ ಪ್ರಕಾರ ನನಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಬೆಂಗಳೂರಿನ ನನ್ನ ನಿವಾಸದಲ್ಲಿ ಹೋಂ ಕ್ವಾರಂಟೈನ್ ಆಗುತ್ತಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ಕೊರೋನಾ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.
ಇತ್ತೀಚೆಗೆ ಕೊಪ್ಪಳ ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ, ನನ್ನ ಜೊತೆ ಆಗಮಿಸಿದ ಐದು ಜನ ಸಿಬ್ಬಂದಿಗಳಿಗೂ ಕೊರೋನಾ ಪಾಸಿಟಿವ್ ಎಂದು ವರದಿ ಬಂದಿರುವುದಾಗಿ ಸಚಿವರು ತಿಳಿಸಿದ್ದಾರೆ.
ಕೊರೋನಾ ಬಗ್ಗೆ ಯಾರೂ ಆತಂಕ ಪಡುವ ಅಗತ್ಯವಿಲ್ಲ. ಕೋವಿಡ್ ವಿರುದ್ಧ ಗೆಲ್ಲುವ ವಿಶ್ವಾಸವಿದೆ. ಜೊತೆಗೆ ನಿಮ್ಮೆಲ್ಲರ ಆಶೀರ್ವಾದ ಮತ್ತು ಹಾರೈಕೆ ಇರಲಿ ಎಂದಿದ್ದಾರೆ.
ಅಲ್ಲದೇ ಇತ್ತೀಚೆಗೆ ನನ್ನನ್ನು ಹಿರೇಕೆರೂರು ಹಾಗೂ ಕೊಪ್ಪಳ ಭಾಗದಲ್ಲಿ ಭೇಟಿಯಾದ ಪ್ರಥಮ ಮತ್ತು ದ್ವಿತೀಯ ಸಂಪರ್ಕಿತರು, ಯಾರಿಗಾದರೂ ಕೋವಿಡ್ ಲಕ್ಷಣ ಕಂಡುಬಂದಲ್ಲಿ ಕೂಡಲೇ ಪರೀಕ್ಷೆಗೆ ಒಳಗಾಗಿ ಎಂದು ಮನವಿ ಮಾಡಿದ್ದಾರೆ.