ಶ್ರೀರಾಮ ಬಿಜೆಪಿಯವರ ಸ್ವತ್ತಲ್ಲ ಎಂದ ಸಂಸದ ಡಿ.ಕೆ ಸುರೇಶ್! | Janata news
ರಾಮನಗರ: : ಶ್ರೀರಾಮ ಬಿಜೆಪಿಯ ಸ್ವತ್ತಲ್ಲ. ದೇಶದ 130 ಕೋಟಿ ಜನರ ಆಸ್ತಿ ಎಂದು ಸಂಸದ ಡಿ.ಕೆ.ಸುರೇಶ್ ವಾಗ್ದಾಳಿ ನಡೆಸಿದರು.
ಬಸವನಪುರ ಗ್ರಾಮದಲ್ಲಿ ಗುರುವಾರ ಪತ್ರಕರ್ತರ ಜೊತೆ ಮಾತನಾಡಿದ ಅವರು ಶ್ರೀರಾಮ ಕೇವಲ ಬಿಜೆಪಿಗೆ ಮಾತ್ರ ಸೀಮಿತವಲ್ಲ. ರಾಮಮಂದಿರ ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನಾಯಕರಿಗೆ ಆಹ್ವಾನ ನೀಡದಿರುವುದು ಬಿಜೆಪಿಯ ಮನಸ್ಥಿತಿಯನ್ನು ತೋರುತ್ತದೆ ಎಂದು ದೂರಿದರು.
ಶ್ರೀರಾಮ 130 ಕೋಟಿ ಭಾರತೀಯರ ಸ್ವತ್ತು ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸದಸ್ಯ ಡಿ.ಕೆ ಸುರೇಶ್ ಅವರು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಕೋವಿಡ್-19 ಸಂಕಷ್ಟ ಕಾಲದಲ್ಲಿ ರಾಜ್ಯ ಸರಕಾರ ಜನರಿಗೆ ನಯ ಪೈಸೆ ಕೊಟ್ಟಿಲ್ಲ, ಕೇವಲ ಭಾಷಣ ಮಾಡೋದು, ಟಿವಿಗಳಲ್ಲಿ ಪ್ರಚಾರ ಪಡೆಯೋದು ಅಷ್ಟೆ ಇವರ ಸಾಧನೆಯಾಗಿದೆ. ಬಿಜೆಪಿ ಸರ್ಕಾರ ಹಗರಣದ ಸರಮಾಲೆ ಬಿಟ್ಟರೆ ಏನು ಮಾಡಿದೆ ಅಂತಾ ಪ್ರಶ್ನೆ ಮಾಡಿದರು.
ರಾಮಮಂದಿರ ಕಾರ್ಯಕ್ರಮವನ್ನು ಬಿಜೆಪಿ ಸ್ವಾರ್ಥಕ್ಕೆ ಬಳಸಿಕೊಂಡಿದೆ. ತಮಗೆ ಮಾತ್ರವೇ ಸೀಮಿತಗೊಳಿಸುವ ಮೂಲಕ ಸರ್ವಾಧಿಕಾರ, ಸಾರ್ವಭೌಮತ್ವ ಪಡೆಯಲು ಯತ್ನಿಸುತ್ತಿದೆ. ಎಲ್ಲರನ್ನು ಒಟ್ಟಿಗೆ ಕರೆದುಕೊಂಡು ಹೋದರಷ್ಟೇ ಅಖಂಡ ಭಾರತ ನಿರ್ಮಿಸಲು ಸಾಧ್ಯ ಎಂದರು.