ಪ್ರಧಾನಿಗೆ ಕೋವಿಡ್ ಕೋವಿಡ್ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮಗಳನ್ನ ಮಾಹಿತಿ ನೀಡಿದ ಸಚಿವರು! | Janata news
ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಗೆ ಮಂಗಳವಾರ ವಿಡಿಯೋ ಸಂವಾದ ನಡೆಸಿದರು.
ರಾಜ್ಯ ಸೋಂಕಿನ ಪ್ರಕರಣಗಳು, ಕೋವಿಡ್ನಿಂದ ಸಂಭವಿಸಿರುವ ಸಾವು, ಸಕ್ರಿಯ ಪ್ರಕರಣಗಳು, ಕೋವಿಡ್ ನಿಯಂತ್ರಿಸಲು ಸರ್ಕಾರ ತೆಗೆದುಕೊಂಡಿರುವ ಕ್ರಮಗಳು, ತಂತ್ರಜ್ಞಾನ ಅಳವಡಿಕೆ, ಕೋವಿಡ್ ಕೇಂದ್ರಗಳು, ಕಂಟೋನ್ಮೆಂಟ್ ಜೋನ್ ಸೇರಿದಂತೆ ಇಂಚಿಂಚೂ ಮಾಹಿತಿಗಳನ್ನು ಪ್ರಧಾನಿಗೆ ಉಭಯ ಸಚಿವರು ವಿವರಿಸಿದರು.
ಸರ್ಕಾರ ಕೈಗೊಂಡ ಕ್ರಮಗಳು
* ರಾಜ್ಯದಲ್ಲಿ ಸರ್ವೇಕ್ಷಣೆ, ಪತ್ತೆ ಹಾಗೂ ರೋಗ ಹರಡುವಿಕೆಯನ್ನು ತಡೆಗಟ್ಟಲು ಹಾಗೂ ಜಾಗೃತಿ ಮೂಡಿಸುವ ಕಾರ್ಯಗಳನ್ನು ಕೈಗೊಳ್ಳಲು ಬೂತ್ ಮಟ್ಟದ ತಂಡಗಳನ್ನು ರಚಿಸಲಾಗಿದೆ ಎಂದು ವಿವರಿಸಿದರು.
* ಪ್ರತಿದಿನ ಕೋವಿಡ್ ಪರೀಕ್ಷೆಯನ್ನು 20 ಸಾವಿರದಿಂದ 50 ಸಾವಿಕ್ಕೆ ಹೆಚ್ಚಿಸಲಾಗಿದೆ. ಮುಂದಿನ ದಿನಗಳಲ್ಲಿ ಈ ಸಂಖ್ಯೆಯನ್ನು 75 ಸಾವಿರಕ್ಕೆ ಹೆಚ್ಚಿಸಲು ಯೋಜಿಸಲಾಗಿದೆ.
* ರಾಜ್ಯದಲ್ಲಿ ಐ.ಸಿ.ಎಂ.ಆರ್ ಅನುಮೋದಿತ 100 ಪ್ರಯೋೀಗಾಲಯಗಳಿದ್ದು, 1,300 ಮೊಬೈಲ್ ಪರೀಕ್ಷಾ ತಂಡಗಳನ್ನು ನಿರ್ಬಂಧಿತ ಸ್ಥಳಗಳು ಹಾಗೂ ಬಫರ್ ವಲಯಗಳಲ್ಲಿ ನಿಯೋಜಿಸಲಾಗಿದೆ.
* 43 ಖಾಸಗಿ ವೈದ್ಯಕೀಯ ಕಾಲೇಜುಗಳು ಹಾಗೂ 17 ಸರ್ಕಾರಿ ಕಾಲೇಜುಗಳು ಸೇರಿದಂತೆ ಶೇ 50 ರಷ್ಟು ಹಾಸಿಗೆಗಳನ್ನು ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತ ಚಿಕಿತ್ಸೆಗೆ ಮೀಸಲಿಡಲಾಗಿದೆ
*ಕರ್ನಾಟಕ ಸರ್ಕಾರ ಎಲ್ಲ ಸೋಂಕಿತರ ಪರೀಕ್ಷ್ಷೆ ಹಾಗೂ ಚಿಕಿತ್ಸೆಯ ವೆಚ್ಚವನ್ನು ಖಾಸಗಿ ಆಸ್ಪತ್ರೆಗಳಿಂದ ಶಿಫಾರಸ್ಸಾಗಿ ಬಂದ ಪ್ರಕರಣಗಳನ್ನೂ ಒಳಗೊಂಡಂತೆ ಭರಿಸುತ್ತಿದೆ.
*ಈಗಾಗಲೇ ಅಸ್ತಿತ್ವದಲ್ಲಿರುವ 1,04,000 ಹಾಸಿಗೆಗಳ ಜೊತೆಗೆ 10,100 ಹಾಸಿಗೆಗಳ ಸಾಮರ್ಥ್ಯ ಹೊಂದಿದ ಕೋವಿಡ್ ಕೇರ್ ಸೆಂಟರ್ ಅನ್ನು ಬೆಂಗಳೂರು ಅಂತರರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ ಸ್ಥಾಪಿಸಲಾಗಿದೆ.
* ರಾಜ್ಯದಲ್ಲಿ ಆಂಬ್ಯುಲೆನ್ಸ್ಗಳ ಸಂಖ್ಯೆಯನ್ನು 800 ರಿಂದ 2000 ಕ್ಕೆ ಹೆಚ್ಚಿಸಲಾಗಿದೆ. ಸಾಮಾಜಿಕ ಅಂತರ ಹಾಗೂ ಮಾಸ್ಕ್ ಧರಿಸುವ ನಿಯಮವನ್ನು ಉಲ್ಲಂಘಿಸಿದ 2,05,029 ಪ್ರಕರಣಗಳನ್ನು ದಾಖಲಿಸಿದ್ದು 6.65 ಕೋಟಿ ರೂ.ಗಳ ದಂಡವನ್ನು ಸಂಗ್ರಹಿಸಲಾಗಿದೆ.
*ಗೃಹ ನಿರ್ಬಂಧ ಉಲ್ಲಂಘಿಸಿದ 3246 ವ್ಯಕ್ತಿಗಳನ್ನು ಮನೆಯಿಂದ ಸಾಂಸ್ಥಿಕ ಕ್ವಾರಂಟೈನ್ಗೆ ಸ್ಥಳಾಂತರಿಸಲಾಗಿದೆ. 5821 ಎಫ್ಐಆರ್ಗಳನ್ನು ದಾಖಲಿಸಲಾಗಿದೆ.
* ಕರ್ನಾಟಕ ಸರ್ಕಾರ ಎಲ್ಲ ಸೋಂಕಿತರ ಪರೀಕ್ಷ್ಷೆ ಹಾಗೂ ಚಿಕಿತ್ಸೆಯ ವೆಚ್ಚವನ್ನು ಖಾಸಗಿ ಆಸ್ಪತ್ರೆಗಳಿಂದ ಶಿಫಾರಸ್ಸಾಗಿ ಬಂದ ಪ್ರಕರಣಗಳನ್ನೂ ಒಳಗೊಂಡಂತೆ ಭರಿಸುತ್ತಿದೆ.
* ಮರಣ ಪ್ರಮಾಣವನ್ನು ಕಡಿತಗೊಳಿಸುವುದು ನಮ್ಮ ಆದ್ಯತೆಯಾಗಿದ್ದು, ಈ ಸಂಬಂಧ ಪರೀಕ್ಷಾ ಪ್ರಮಾಣದಲ್ಲಿ ಹೆಚ್ಚಳ, ಸ್ಯಾಂಪಲ್ ಸಂಗ್ರಹ ಮತ್ತು ತ್ವರಿತ ಫಲಿತಾಂಶಗಳನ್ನು ಒದಗಿಸುವುದು ಹಾಗೂ ಮನೆಯಿಂದ ಆಸ್ಪತ್ರೆಗೆ ಸ್ಥಳಾಂತರವಾಗುವ ಸಮಯದಲ್ಲಿ ಕಡಿತ – ಇವೆಲ್ಲ ಕ್ರಮಗಳಿಂದ ಮರಣ ಪ್ರಮಾಣವನ್ನು ಆಗಸ್ಟ್ ವೇಳೆಗೆ 1.8 ಗೆ ಇಳಿಸಲಾಗಿದೆ.
* ಪ್ರತಿದಿನ ಕೊರೊನಾ ಪರೀಕ್ಷೆ ಪ್ರಮಾಣವನ್ನು ಹೆಚ್ಚಳ ಮಾಡಲಾಗಿದೆ. ಚೇತರಿಕೆ ಪ್ರಮಾಣವು ಏರಿಕೆಯಾಗಿದೆ. ಸರ್ಕಾರ ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ ಎಂದು ತಿಳಿಸಿದರು.
ಇಂದು ಸನ್ಮಾನ್ಯ ಪ್ರಧಾನಿ ಶ್ರೀ @narendramodi ಹಾಗೂ ಸನ್ಮಾನ್ಯ ರಕ್ಷಣಾ ಸಚಿವ ಶ್ರೀ @rajnathsingh ಅವರು ಹಲವು ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ನಡೆಸಿದ ವೀಡಿಯೋ ಸಂವಾದದಲ್ಲಿ ಪಾಲ್ಗೊಂಡು ರಾಜ್ಯದಲ್ಲಿ ಕೊರೋನ ನಿಯಂತ್ರಿಸಲು ತೆಗೆದುಕೊಳ್ಳಲಾಗಿರುವ ಕ್ರಮಗಳು ಕುರಿತು ಮಾನ್ಯ ಪ್ರಧಾನಿಯವರಿಗೆ ವಿವರಿಸಲಾಯಿತು. (1/2) pic.twitter.com/ahd7tNGly6
— Dr Sudhakar K (@mla_sudhakar) August 11, 2020