ಸುಶಾಂತ್ ಸಿಂಗ್ ಪ್ರಕರಣ ಸಿಬಿಐಗೆ-ಸುಪ್ರಿಂ : ಮಹಾರಾಷ್ಟ್ರ ಸರ್ಕಾರದ ಮೇಲೆ ಪ್ರತಿಪಕ್ಷದ ವಾಗ್ದಾಳಿ | Janata news
ಮುಂಬೈ : ಮಹಾರಾಷ್ಟ್ರ ಸರ್ಕಾರಕ್ಕೆ ಬಾರಿ ಮುಖಭಂಗವೆನ್ನುವಂತೆ, ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿನ ಪ್ರಕರಣದಲ್ಲಿ ತನಿಖೆಯನ್ನು ಸಿಬಿಐಗೆ ವರ್ಗಾಯಿಸಲು ಸರ್ವೋಚ್ಚ ನ್ಯಾಯಾಲಯ ಅದೇಶಿಸಿದ ಬೆನ್ನಲ್ಲೇ, ಉದ್ಭವ್ ಠಾಕ್ರೆ ನೇತ್ರತ್ವದ ಮಹಾ ಆಘಾಡಿ ಮೈತ್ರಿ ಸರ್ಕಾರ ದೇಶಾದ್ಯಂತ ಚಿಮಾರಿ ಎದುರಿಸುತ್ತಿದೆ. ಪ್ರಕರಣದಲ್ಲಿ ಮಹಾರಾಷ್ಟ್ರ ಸರ್ಕಾರದ ನಡೆದು ಕೊಂಡಿರುವ ಕುರಿತು ದೇಶಾದ್ಯಂತ ಭಾರಿ ಆರೋಪ, ಆಕ್ರೋಶ ವ್ಯಕ್ತವಾಗಿತ್ತು.
ಸುಪ್ರಿಂಕೋರ್ಟ್ ಆದೇಶದ ಕುರಿತು ಪ್ರತಿಕ್ರಿಯೆ ನೀಡಿರುವ ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ಮುಖಂಡ ದೇವೇಂದ್ರ ಪಡ್ನವಿಸ್, ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿನ ಪ್ರಕರಣದಲ್ಲಿ ತನಿಖೆ ನಡೆಸಿದ ರೀತಿಯ ಕುರಿತು ಮಹಾರಾಷ್ಟ್ರ ಸರ್ಕಾರ ಆತ್ಮಾವಲೋಕನ ಮಾಡಿಕೊಳ್ಳಬೇಕು, ಎಂದು ವಾಗ್ದಾಳಿ ನಡೆಸಿದ್ದಾರೆ.
ಸುಪ್ರಿಂಕೋರ್ಟ್ ಆದೇಶ ಸ್ವಾಗತಿಸಿರುವ ಕೇಂದ್ರ ಸಚಿವ ಮತ್ತು ಅರ್ರಾ ಸಂಸದ ಆರ್.ಕೆ.ಸಿಂಗ್, ಈ ಸಂದರ್ಭದಲ್ಲಿ ಮುಂಬೈ ಪೊಲೀಸರು ಸರಿಯಾದ ತನಿಖೆ ನಡೆಸದಿರುವುದು ದುರದೃಷ್ಟಕರ, ಎಂದಿದ್ದಾರೆ.
ಯಾವುದೇ ಕಾರಣಕ್ಕೂ ಸುಶಾಂತ್ ಪ್ರಕರಣವನ್ನು ಸಿಬಿಐ ಗೆ ಹಸ್ತಾಂತರಿಸುವುದಿಲ್ಲ ಎಂದು ಈ ಮೊದಲು ಪಟ್ಟು ಹಿಡಿದು ಕೂತಿದ್ದ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ಮುಖ್ ಈಗ, ಸುಪ್ರೀಂ ಕೋರ್ಟ್ ತೀರ್ಪು ಬಂದಿದೆ, ಒಮ್ಮೆ ನಾವು ಆದೇಶದ ಪ್ರತಿ ಪಡೆದರೆ ನಾವು ಅದರ ಬಗ್ಗೆ ಪ್ರತಿಕ್ರಿಯಿಸುತ್ತೇವೆ, ಎಂದು ಒಲ್ಲದ ಮನಸ್ಸಿಂದ ಪ್ರತಿಕ್ರಿಯೆ ನೀಡಿದ್ದಾರೆ.
ಅಲ್ಲದೇ, ಶಿವಸೇನಾ ಮುಖಂಡ ಸಂಜಯ್ ರಾಉತ್, ಸುಪ್ರೀಂ ಕೋರ್ಟ್ ತೀರ್ಪಿನ ಬಗ್ಗೆ ಪ್ರತಿಕ್ರಿಯಿಸುವುದು ನನಗೆ ಸರಿಹೊಂದುವುದಿಲ್ಲ. ಸುಪ್ರೀಂ ಕೋರ್ಟ್ ತನ್ನ ತೀರ್ಪು ನೀಡಿದೆ, ರಾಜಕೀಯ ಅಭಿಪ್ರಾಯಗಳನ್ನು ನೀಡುವುದು ಸರಿಯಲ್ಲ, ಎಂದಷ್ಟೇ ಹೇಳಿ ನುಣುಚಿಕೊಂಡಿದ್ದಾರೆ.
ಸುಶಾಂತ್ ಅವರ ಸಾವಿನ ಪ್ರಕರಣದ ತನಿಖೆಯನ್ನು ಪಾಟ್ನಾದಿಂದ ಮುಂಬೈಗೆ ವರ್ಗಾಯಿಸುವಂತೆ ನಟ ರಿಯಾ ಚಕ್ರವರ್ತಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಬುಧವಾರ ತಿರಸ್ಕರಿಸಿದೆ. ಪಾಟ್ನಾದಲ್ಲಿ ದಾಖಲಾದ ಎಫ್ಐಆರ್ ತನಿಖೆಗಾಗಿ ಸಿಬಿಐಗೆ ಒಪ್ಪಿಗೆ ನೀಡಲು ಬಿಹಾರ ಸರ್ಕಾರ ಸಮರ್ಥವಾಗಿದೆ, ಎಂದು ನ್ಯಾಯಾಲಯ ಹೇಳಿದೆ.
ತನ್ನ ಮಗನ ಆತ್ಮಹತ್ಯೆಗೆ ರಿಯಾ ಚಕ್ರವರ್ತಿ ಕಾರಣ ಎಂದು ರಜಪೂತ ತಂದೆ ಕೆ.ಕೆ.ಸಿಂಗ್ ಅವರ ದೂರಿನ ಆಧಾರದ ಮೇಲೆ, ಪಾಟ್ನಾ ಪೊಲೀಸರು ಜುಲೈ 25 ರಂದು ಎಫ್ಐಆರ್ ದಾಖಲಿಸಿದ್ದಾರೆ.
ನ್ಯಾಯಮೂರ್ತಿ ಹೃಷಿಕೇಶ ರಾಯ್ ಅವರ ಏಕ ನ್ಯಾಯಾಧೀಶರ ಪೀಠವು ತೀರ್ಪನ್ನು ಘೋಷಿಸಿತು. ಪಾಟ್ನಾದಲ್ಲಿ ನೋಂದಾಯಿಸಲಾದ ಎಫ್ಐಆರ್ ಬಹಿರಂಗಪಡಿಸಿದ ವಿಷಯಗಳು ಮುಂಬೈ ಪೊಲೀಸರಿಗೂ ನ್ಯಾಯವ್ಯಾಪ್ತಿಯನ್ನು ಹೊಂದಿವೆ ಎಂದು ಸೂಚಿಸುತ್ತದೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.
ಈ ಪ್ರಕರಣದಲ್ಲಿ ಬಿಹಾರ ಪೊಲೀಸರಿಗೆ ಯಾವುದೇ ನ್ಯಾಯವ್ಯಾಪ್ತಿಯಿಲ್ಲ ಮತ್ತು ನಟನ ಸಾವನ್ನು ರಾಜ್ಯದ ಚುನಾವಣೆಗಳಿಗೆ ಮುಂಚಿತವಾಗಿ ರಾಜಕೀಯ ಲಾಭಕ್ಕಾಗಿ ಬಳಸಲಾಗುತ್ತಿದೆ ಎಂದು ಚಕ್ರವರ್ತಿ ತನ್ನ ಅರ್ಜಿಯಲ್ಲಿ ತಿಳಿಸಿದ್ದರು.
ರಜಪೂತರ ಬ್ಯಾಂಕ್ ಖಾತೆಯಿಂದ ರಿಯಾ ಚಕ್ರವರ್ತಿ ಅಕ್ರಮವಾಗಿ ರೂ.15 ಕೋಟಿ ವರ್ಗಾಯಿಸಿಕೊಂಡಿದ್ದಾರೆ ಎಂದು . ಆದಾಗ್ಯೂ, ನಟಿ ರಿಯಾ ಎಲ್ಲಾ ಆರೋಪಗಳನ್ನು ನಿರಾಕರಿಸಿದ್ದಾರೆ ಮತ್ತು ಜಾರಿ ನಿರ್ದೇಶನಾಲಯ(ಇಡಿ) ಪ್ರಾರಂಭಿಸಿದ ತನಿಖೆಗೆ ಸಹಕರಿಸುವುದಾಗಿ ಹೇಳಿದ್ದಾರೆ. ಏತನ್ಮಧ್ಯೆ, ಸಿಂಗ್ ಅವರನ್ನು ಮಂಗಳವಾರ ತನ್ನ ಮಗನ ಹಣಕಾಸಿನ ಕುರಿತು ಇಡಿ ಪ್ರಶ್ನಿಸಿದರು.
ಕೇಂದ್ರೀಯ ತನಿಖಾ ದಳ (ಸಿಬಿಐ) ಚಕ್ರವರ್ತಿ ಮತ್ತು ಅವರ ಕುಟುಂಬದ ಮೂವರು ಸದಸ್ಯರ ವಿರುದ್ಧವೂ ಪ್ರಕರಣ ದಾಖಲಿಸಿದೆ.