ಡಿ.ಕೆ. ಶಿವಕುಮಾರ್ ಒಬ್ಬ ದೊಡ್ಡ ಕಳ್ಳ: ಸಿ.ಪಿ.ಯೋಗೇಶ್ವರ್ ವಾಗ್ದಾಳಿ | Janata news
ಬೆಂಗಳೂರು : ಡಿಕೆ ಶಿವಕುಮಾರ್ ಒಬ್ಬ ದೊಡ್ಡ ಕಳ್ಳ. ಅವರ ಪೋನ್ ಕದ್ದಾಲಿಕೆ ಮಾಡಿ ನಮ್ಮ ಸರ್ಕಾರ ಯಾವ ರಾಜ್ಯ ಗೆಲ್ಲಬೇಕಾಗಿದೆ ಎಂಬುದಾಗಿ ಡಿಕೆ ಶಿವಕುಮಾರ್ ವಿರುದ್ಧ ಕಿಡಿಕಾರಿದ್ದಾರೆ.
ಚನ್ನಪಟ್ಟಣದಲ್ಲಿ ಮಾತನಾಡಿದ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್, ಡಿ.ಕೆ.ಶಿವಕುಮಾರ್ ಅವರೇ ಕಳ್ಳ, ಅವರು ಇನ್ನೊಬ್ಬರ ಮೇಲೆ ಆರೋಪ ಮಾಡೋದು ಏನಿದೆ? ಅವರ ಫೋನ್ನನ್ನು ಯಾವ ಉದ್ದೇಶಕ್ಕಾಗಿ ಕದ್ದಾಲಿಕೆ ಮಾಡಬೇಕು? ಅದರ ಅಗತ್ಯ ಏನಿದೆ? ಅವರ ಫೋನ್ ಕದ್ದಾಲಿಕೆ ಮಾಡಿ ಯಾವ ರಾಜ್ಯ ಗೆಲ್ಲಬೇಕು. ಹಿಂದೊಮ್ಮೆ ಅವರೇ ಕಾಲ್ ಟ್ಯಾಪಿಂಗ್ ಮಾಡಿಸಿ, ನನ್ನ ಮೇಲೆ ಫೋನ್ ಕದ್ದಾಲಿಕೆ ಆರೋಪ ಮಾಡಿದ್ದರು ಎಂದು ಟೀಕಿಸಿದರು.
ಜನರ ಗಮನವನ್ನು ಬೇರೆ ಕಡೆ ಸೆಳೆಯುವ ಪ್ರಯತ್ನವನ್ನು ಡಿ.ಕೆ.ಶಿವಕುಮಾರ್ ಮಾಡುತ್ತಿದ್ದಾರೆ. ಯಾವ ಉದ್ದೇಶಕ್ಕಾಗಿ ಅವರ ಫೋನ್ ಟ್ಯಾಪ್ ಮಾಡಬೇಕು. ಅದೊಂದು ಸುಳ್ಳು ಆರೋಪ ಎಂದು ಸಿ.ಪಿ.ಯೋಗೇಶ್ವರ್ ಕಿಡಿಕಾರಿದರು. ಫೋನ್ ಕದ್ದಾಲಿಕೆ ಮಾಡುವುದರಲ್ಲಿ ಡಿಕೆಶಿ ಅನುಭವಿ ಎಂದು ಟೀಕಿಸಿದರು.