ನಿಂತಿದ್ದ ಲಾರಿಗೆ KSRTC ಬಸ್ ಡಿಕ್ಕಿ: ಕಂಡಕ್ಟರ್ ಹೊಟ್ಟೆಗೆ ಚುಚ್ಚಿದ ಕಬ್ಬಿಣದ ರಾಡ್ಗಳು! | Janata news
ಬಳ್ಳಾರಿ: : ಕೂಡ್ಲಿಗಿ ಪಟ್ಟಣ ಹೊರವಲಯದ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಿಂತಿದ್ದ ಲಾರಿಯೊಂದಕ್ಕೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ ಕಂಡಕ್ಟರ್ ಹೊಟ್ಟೆಗೆ ಕಬ್ಬಿಣದ ರಾಡುಗಳು ಹೊಕ್ಕಿರುವ ಘಟನೆ ನಡೆದಿದೆ.
ಕಬ್ಬಿಣದ ರಾಡ್ ತುಂಬಿದ್ದ ಲಾರಿಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಬಸ್ನ ಎಡಭಾಗದಲ್ಲಿ ಕಂಡಕ್ಟರ್ ಕುಳಿತಿದ್ದ. ಹೀಗಾಗಿ ಡಿಕ್ಕಿ ಹೊಡೆದ ರಭಸಕ್ಕೆ ಕಂಡಕ್ಟರ್ ಹೊಟ್ಟೆಗೆ ಕಬ್ಬಿಣದ ರಾಡ್ಗಳು ಚುಚ್ಚಿವೆ.
ತಕ್ಷಣ ಸ್ಥಳೀಯರು ಕಂಡಕ್ಟರ್ಗೆ ಚುಚ್ಚಿರುವ ರಾಡ್ಗಳನ್ನ ಕತ್ತರಿಸಿದ್ದಾರೆ. ಬಳಿಕ ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಆತನನ್ನು ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿ ವಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಈ ಕುರಿತು ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
English summary :Accident in Ballari