ಜೋಗ ಜಲಪಾತದ ತುತ್ತ ತುದಿಯಲ್ಲಿ ನಿಂತು ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ: ಯಾಕೆ? | Janata news
ಶಿವಮೊಗ್ಗ: : ರಾಣಿ ಫಾಲ್ಸ್ನಿಂದ ಹಾರಿ ಆತ್ಮಹತ್ಯೆ ಗೆ ಮುಂದಾಗಿದ್ದ ಬೆಂಗಳೂರು ಮೂಲದ ಯುವಕನನ್ನು ಪೊಲೀಸರು ರಕ್ಷಣೆ ಮಾಡಿರುವ ಘಟನೆ ಜಿಲ್ಲೆಯ ಸಾಗರ ತಾಲೂಕಿನ ಜೋಗ್ ಜಲಪಾತದ ಬಳಿ ನಡೆದಿದೆ.
ಬೆಂಗಳೂರಿನ ಇಂದಿರಾ ನಗರದ ಚೇತನ್ ಎಂಬ ಯುವಕ ಜೋಗದ ರಾಣಿ ಫಾಲ್ಸ್ನಿಂದ ಹಾರಿ ಆತ್ಮಹತ್ಯೆಗೆ ಮುಂದಾಗಿದ್ದ. ರಿಯಲ್ ಎಸ್ಟೇಟ್ ಉದ್ಯಮ ಮಾಡಿಕೊಂಡಿದ್ದ ಚೇತನ್ ಕಳೆದ 6 ತಿಂಗಳಿಂದ ಲಾಕ್ ಡೌನ್ ಆದ ಪರಿಣಾಮ ಕೆಲಸ ಇಲ್ಲದೆ ಮನೆಯಲ್ಲೇ ಇದ್ದು ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ.
ಬುಧವಾರ ಬ್ರಿಟಿಷ್ ಬಂಗ್ಲೋ ಬಳಿಯಿಂದ ಜೋಗ ಜಲಪಾತದ ತುತ್ತ ತುದಿಗೆ ತೆರಳಿದ್ದ ಇದನ್ನು ಗಮನಿಸಿದ ಅಲ್ಲಿನ ಸಿಬ್ಬಂದಿ ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ.
ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಯುವಕನನ್ನು ರಕ್ಷಣೆ ಮಾಡಿದ್ದಾರೆ.
English summary :Jog Falls Sagara shivamogga