ಪ್ರೀತಿಯಲ್ಲಿ ಮೋಸ: ಎಂಬಿಎ ಪದವೀಧರೆ ಆತ್ಮಹತ್ಯೆಗೆ ಶರಣು! | Janata news
ಉಡುಪಿ : ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಸಾಯ್ಬರಕಟ್ಟೆಯ ಕಾಜ್ರಳ್ಳಿ ನಿವಾಸಿ ಅನಿಶಾ. ಜಿ. ಪೂಜಾರಿ ಆತ್ಮಹತ್ಯೆ ಮಾಡಿಕೊಂಡ ಯುವತಿಯಾಗಿದ್ದಾಳೆ.
ಎಂಬಿಎ ಪದವೀಧರೆ ಯಾಗಿದ್ದ ಅನಿಶಾ. ಜಿ. ಪೂಜಾರಿ ಮತ್ತು ಚೇತನ್ ಶೆಟ್ಟಿ ಕಳೆದ ಐದಾರು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ತನ್ನನ್ನು ಮದುವೆಯಾಗು ಎಂದು ಅನಿಶಾ ಕೇಳಿದಕ್ಕೆ ಚೇತನ್ ಮದುವೆಗೆ ಒಪ್ಪಿರಲಿಲ್ಲ. ಬಳಿಕ ಅನಿಶಾ ಳನ್ನು ನಿರ್ಲಕ್ಷ್ಯ ಮಾಡಲು ಪ್ರಾರಂಭಿಸಲಿದ್ದ ಎನ್ನಲಾಗಿದೆ.
ಕೊನೆಗೆ ಅನಿಶಾ ನಾಲ್ಕು ಪುಟಗಳ ಡೆತ್ ನೋಟ್ ಬರೆದು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಸಾವಿಗೆ ಮುನ್ನ ಪ್ರಿಯತಮ ತನ್ನನ್ನು ನಂಬಿಸಿ ಮೋಸ ಮಾಡಿರುವ ಬಗ್ಗೆ ಗೆಳತಿಗೆ ಸಂದೇಶಗಳನ್ನು ರವಾನಿಸಿದ್ದಾಳೆ.
ತನ್ನ ಫೇಸ್ ಬುಕ್ ನಲ್ಲಿ ಚೇತನ್ ಒಬ್ಬ ಗರ್ಲ್ಸ್ ಹುಚ್ಚ ಎಂದು ಬರೆದು ಫೋಟೋ ಅಪ್ಲೋಡ್ ಮಾಡಿದ್ದಾಳೆ.
ಸದ್ಯ ಚೇತನ್ ತಲೆಮರೆಸಿಕೊಂಡಿದ್ದಾನೆ.