ಕ್ಷುಲ್ಲಕ ಕಾರಣಕ್ಕೆ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ! | Janata news
ರಾಯಚೂರು : ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯನ್ನ ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಚ್ಚಿ ಹತ್ಯೆ ಮಾಡಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.
ನಗರದ ಪಾರ್ ಕೋಟ್ ಬಡಾವಣೆ ನಿವಾಸಿ ಸಲ್ಮಾನ್ ಮಹೆಬೂಬ (28) ಹತ್ಯೆಗೀಡಾದ ವ್ಯಕ್ತಿ. ಮಂಗಳವಾರ ತಡರಾತ್ರಿ ಗಂಗಾ ನಿವಾಸದ ಬಳಿ ಬೈಕ್ ನಿಲ್ಲಿಸುವ ವಿಚಾರವಾಗಿ ಗಲಾಟೆ ನಡೆದಿದೆ ಎನ್ನಲಾಗಿದೆ. ನಾಲ್ವರ ದುಷ್ಕರ್ಮಿಗಳ ಗುಂಪು ಸಲ್ಮಾನ್ ಮೇಲೆ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಸದರ್ಬಜಾರ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಕ್ಷುಲ್ಲಕ ಕಾರಣಕ್ಕೆ ಘಟನೆ ಸಂಭವಿಸಿರಬಹುದೆಂದು ಊಹಿಸಲಾಗಿದ್ದು, ತನಿಖೆ ಬಳಿಕ ಘಟನೆಗೆ ನಿಖರ ಕಾರಣ ತಿಳಿದು ಬರಲಿದೆ.
ಕೊಲೆಗೀಡಾಗಿರುವ ವ್ಯಕ್ತಿ ಪತ್ನಿ ನಾಲ್ವರ ಮೇಲೆ ದೂರು ನೀಡಿದ್ದು, ದುರ್ಷ್ಕಮಿಗಳ ಬಂಧನಕ್ಕೆ ಪೊಲೀಸರು ಶೋಧ ನಡೆಸುತ್ತಿದ್ದಾರೆ.ಈ ಸಂಬಂಧ ಸದರ್ ಬಜಾರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.