ಕೊರೊನಾಗೆ ಪೊಲೀಸ್ ಕಾನ್ಸ್ ಟೇಬಲ್ ಸಾವು : ವೈದ್ಯರು, ಸಿಬ್ಬಂದಿಯಿಂದ ಪ್ರತಿಭಟನೆ! | Janata news
ಕೊಪ್ಪಳ : ಕೊರೊನಾ ವೈರಸ್ ನಿಂದ ಪೊಲೀಸ್ ಕಾನ್ಸ್ ಟೇಬಲ್ ಸಾವನ್ನಪ್ಪಿದ್ದು, ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯದಿಂದಲೇ ಪೊಲೀಸ್ ಕಾನ್ಸ್ ಟೇಬಲ್ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಿ ಕಾನ್ಸ್ ಟೇಬಲ್ ಸಂಬಂಧಿಕರು ವೈದ್ಯರೊಬ್ಬರ ಮೇಲೆ ಮಾಡಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ.
ಕಳೆದೊಂದು ವಾರದ ಹಿಂದೆ ಕೊಪ್ಪಳ ಸಂಚಾರಿ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ರಾಮಣ್ಣ ಎಂಬೋರು, ಕೊರೊನಾ ಸೋಂಕಿನಿಂದ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಆದರೆ, ನಿನ್ನೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಈ ವಿಷ್ಯ ತಿಳಿಯುತ್ತಿದ್ದಂತೆ ಆಸ್ಪತ್ರೆಗೆ ದೌಡಾಯಿಸಿ ಬಂದ ಕಾನ್ಸ್ಟೇಬಲ್ ಕುಟುಂಬಸ್ಥರು, ವೈದ್ಯರ ನಿರ್ಲಕ್ಷ್ಯ ಎಂದು ಆರೋಪಿಸಿದ್ದಾರೆ. ಅಷ್ಟೇ ಅಲ್ಲ ಪೇಷೆಂಟ್ ಸ್ಥಿತಿ ಸೀರಿಯಸ್ ಆಗಿದ್ದರೂ ಮನೆಯವರಿಗೆ ತಿಳಿಸಿಲ್ಲ ಎಂದು ಗರಂ ಆಗಿ ವೈದ್ಯರ ಮೇಲೆ ಹಲ್ಲೆ ಮಾಡಿದ್ದಾರೆಂದು ಆರೋಪಿಸಲಾಗಿದೆ.
ಹಲ್ಲೆ ಘಟನೆಯಿಂದ ಆಕ್ರೋಶಗೊಂಡ ಆಸ್ಪತ್ರೆ ಸಿಬ್ಬಂದಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಆಗಮನಕ್ಕೆ ಪಟ್ಟು ಹಿಡಿದರು.ಸ್ಥಳಕ್ಕೆ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಭೇಟಿ ನೀಡಿ ಎಫ್ಐಆರ್ ದಾಖಲಿಸುವಂತೆ ಸೂಚಿಸಿದರು.
ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದಂತೆ ಕೊಪ್ಪಳ ಜಿಲ್ಲಾಧಿಕಾರಿ ಹಾಗೂ ಕಿಮ್ಸ್ ನಿರ್ದೇಶಕ ವಿಜಯನಾಥ್ ಇಟಗಿ ದೌಡಾಯಿಸಿ ಬಂದು. ಪರಿಸ್ಥಿತಿಯನ್ನು ಹತೋಟಿಗೆ ತಂದರು. ವೈದ್ಯರು ಮತ್ತೆ ಕರ್ತವ್ಯಕ್ಕೆ ಮರಳುವಂತೆ ಮನವೊಲಿಸಿದರು.