ಕೂಲಿ-ಕೆಲಸಕ್ಕೆ ಕರೆದೊಯ್ಯುತ್ತಿದ್ದ ಬಾಲಕಾರ್ಮಿಕರ ರಕ್ಷಣೆ! | Janata news
ರಾಯಚೂರು : ಕೂಲಿ ಕೆಲಸಕ್ಕೆ ಕರೆದೊಯ್ಯುತ್ತಿದ್ದ 59 ಬಾಲ ಕಾರ್ಮಿಕರನ್ನು ಜಿಲ್ಲಾ ಮಕ್ಕಳ ರಕ್ಷಣಾ ಇಲಾಖೆಯ ಅಧಿಕಾರಿಗಳು ರಕ್ಷಣೆ ಮಾಡಿದ್ದಾರೆ.
ಬಾಲ ಕಾರ್ಮಿಕ ಯೋಜನೆ, ಜಿಲ್ಲಾ ಮಕ್ಕಳ ರಕ್ಷ ಣಾ ಘಟಕ, ತಾಲೂಕು ಆಡಳಿತ, ಕಾರ್ಮಿಕ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ, ಸಾರಿಗೆ ಇಲಾಖೆ, ಮಕ್ಕಳ ಸಹಾಯವಾಣಿ ಹಾಗೂ ಪೊಲೀಸ್ ಇಲಾಖೆಯ ನೇತೃತ್ವದಲ್ಲಿ ದಾಳಿ ನಡೆಸಿಲಾಯಿತು. ಸಿರವಾರ, ಕೊಪ್ಪರ, ನಗರಗುಂಡ ಕ್ರಾಸ್ ದಾಳಿ ನಡೆಸಿ 59 ಬಾಲ ಕಾರ್ಮಿಕರನ್ನು ರಕ್ಷಿಸಿದ್ದಾರೆ.
ಅವರನ್ನು ಮತ್ತೊಮ್ಮೆ ಕೂಲಿ ಕೆಲಸಕ್ಕೆ ಕಳುಹಿಸದಂತೆ ಎಚ್ಚರಿಸಿ ಪಾಲಕರೊಂದಿಗೆ ವಾಪಸ್ಸು ಕಳುಹಿಸಲಾಗಿದೆ ಎಂದು ಬಾಲ ಕಾರ್ಮಿಕ ಯೋಜನೆಯ ಜಿಲ್ಲಾ ಯೋಜನಾಧಿಕಾರಿ ಮಂಜುನಾಥ ರೆಡ್ಡಿ ತಿಳಿಸಿದ್ದಾರೆ.
ಮಕ್ಕಳನ್ನು ಕರೆದೊಯ್ಯುತ್ತಿದ್ದ 10 ಗೂಡ್ಸ್ ವಾಹನಗಳನ್ನು ಜಪ್ತಿ ಮಾಡಿದ್ದಾರೆ. ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.