ನಟಿ ರಾಗಿಣಿ ಯಾರು ಎಂಬುದು ನನಗೆ ಗೊತ್ತೇ ಇಲ್ಲ: ಸಚಿವ ನಾರಾಯಣಗೌಡ | Janata news
ಚಾಮರಾಜನಗರ : ಸ್ಯಾಂಡಲ್ವುಡ್ಗೆ ಡ್ರಗ್ಸ್ ಜಾಲದ ಪ್ರಕರಣದಲ್ಲಿ ನಟಿ ರಾಗಿಣಿ ಬಂಧನ ಹಿನ್ನೆಲೆ, ಚಾಮರಾಜನಗರದಲ್ಲಿ ತೋಟಗಾರಿಕೆ ಸಚಿವ ಕೆಸಿ ನಾರಾಯಣಗೌಡ ಹೇಳಿಕೆ ನೀಡಿದ್ದಾರೆ.
ಚಿತ್ರರಂಗಕ್ಕೂ ನನಗೂ ಹೆಚ್ಚಿನ ಸಂಪರ್ಕ ಇಲ್ಲ. ಉಪ ಚುನಾವಣೆ ಸಂದರ್ಭದಲ್ಲಿ ಪಕ್ಷದ ಹಿತೈಷಿಗಳು ರಾಗಿಣಿ ಅವರನ್ನು ಪ್ರಚಾರಕ್ಕೆ ಕರೆಸಿದ್ದರು. ನಟಿ ರಾಗಿಣಿ ಅವರನ್ನು ನಾನು ಪ್ರಚಾರಕ್ಕೆ ಕರೆಸಿರಲಿಲ್ಲ. ಅವರಾಗಿಯೇ ಪ್ರಚಾರಕ್ಕೆ ಬಂದರೆ ಬರಬೇಡಿ ಅಂತ ಹೇಳಲು ಸಾಧ್ಯವೇ? ಎಂದು ಸಚಿವ ನಾರಾಯಣ ಗೌಡ ಪ್ರಶ್ನಿಸಿದರು.
ನಟಿ ರಾಗಿಣಿ ಯಾರು ಎಂದು ನನಗೆ ಗೊತ್ತೇ ಇಲ್ಲ, ಚುನಾವಣೆಯಲ್ಲಿ ನನ್ನ ಬೆಂಬಲಿಗರು ಪ್ರಚಾರಕ್ಕೆ ಕರೆಸಿದ್ದರು. ಆದರೆ ಸಿನಿಮಾ ರಂಗಕ್ಕೂ ನನಗೂ ಯಾವುದೇ ನಂಟಿಲ್ಲ ಎಂದು ಪ್ರತಿಕ್ರಿಯೆ ನೀಡಿದ್ದಾರೆ.
ರಾಗಿಣಿ ಅವರು ಈ ರೀತಿ ಎಂದು ಗೊತ್ತಿರಲಿಲ್ಲ. ರಾಗಿಣಿ ಪರವಾಗಿ ನಮ್ಮ ಪಕ್ಷದಲ್ಲಿ ಯಾರೂ ಇಲ್ಲ ಎಂದು ಎಂದು ಪೌರಾಡಳಿತ, ತೋಟಗಾರಿಕೆ ಹಾಗೂ ರೇಷ್ಮೆ ಸಚಿವ ನಾರಾಯಣ ಗೌಡ ಅವರು ಸ್ಪಷ್ಟ ಪಡಿಸಿದ್ದಾರೆ.