ಯಲಹಂಕ ವೀರ ಸಾವರ್ಕರ್ ಮೇಲ್ಸೇತುವೆ ಉದ್ಘಾಟಿಸಿದ ಸಿಎಂ ಬಿಎಸ್ ವೈ! | Janata news
ಬೆಂಗಳೂರು : ಯಲಹಂಕ ಉಪನಗರದ ಸಂದೀಪ್ ಉನ್ನಿಕೃಷ್ಣನ್ ರಸ್ತೆಯಲ್ಲಿ ನಿರ್ಮಾಣಗೊಂಡಿರುವ ಮೇಲ್ಸೆತುವೆಯನ್ನು ಸಿಎಂ ಯಡಿಯೂರಪ್ಪನವರು ಉದ್ಘಾಟನೆ ಮಾಡಿದ್ದು, ಅದಕ್ಕೆ ವೀರ ಸಾವರ್ಕರ್ ಮೇಲ್ಸೇತುವೆ ಎಂದು ನಾಮಕರಣ ಮಾಡಿದ್ದಾರೆ.
34 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರೊ ಈ ಮೇಲ್ಸೇತುವೆ 400 ಮೀಟರ್ ಉದ್ದ, 17 ಮೀಟರ್ ಅಗಲದ 4 ಪಥವಿದೆ.
ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ್, ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಪ್ರವಾಸೋದ್ಯಮ ಸಚಿವ ಸಿ.ಟಿ ರವಿ, ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್, ಸ್ಥಳೀಯ ಶಾಸಕ ವಿಶ್ವನಾಥ್ ಭಾಗಿಯಾಗಿದ್ದರು.
ಯಲಹಂಕದ ಡೈರಿ ಸರ್ಕಲ್ ಬಳಿ 34 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಮೇಲ್ಸೇತುವೆ ಇದಾಗಿದ್ದು, ಕಳೆದ ಹಲವು ತಿಂಗಳ ಹಿಂದೆಯೇ ಈ ಬ್ರಿಡ್ಜ್ ಗೆ ವಿಋ ಸಾವರ್ಕರ್ ಹೆಸರು ನಾಮಕರಣ ಮಾಡಲು ಶಾಸಕ ಹಾಗೂ ಸಿಎಂ ರಾಜಕೀಯ ಕಾರ್ಯದರ್ಶಿ ಮುಂದಾಗಿದ್ದರು.
ಬಿಬಿಎಂಪಿಯಿಂದ ನಿರ್ಮಾಣಗೊಂಡಿರುವ ಮೇಲ್ಸೇತುವೆಗೆ ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಹೆಸರಿಡುವ ಸಂಬಂಧ ಪರ ವಿರೋಧ ಅಭಿಪ್ರಾಯ ವ್ಯಕ್ತವಾಗಿತ್ತು. ನೂತನ ಮೇಲ್ಸೇತುವೆ ಉದ್ಘಾಟನೆ ಹಾಗೂ ವೀರ ಸಾವರ್ಕರ್ ಹೆಸರು ನಾಮಕರಣ ಮಾಡಲು ಬಿಬಿಎಂಪಿಯಿಂದ ಕಳೆದ ಮೇ. 28 ರಂದು ಕಾರ್ಯಕ್ರಮ ನಿಗದಿಯಾಗಿತ್ತು. ಆದರೆ ವೀರ ಸಾವರ್ಕರ್ ಹೆಸರಿಡುವುದನ್ನು ವಿರೋಧಿಸಿ ಪ್ರತಿಪಕ್ಷಗಳು, ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ಬೆದರಿಕೆ ಒಡ್ಡಿದ್ದವು. ಹೀಗಾಗಿ ಸರ್ಕಾರ ಕಾರ್ಯಕ್ರಮ ರದ್ದು ಮಾಡಿತ್ತು.