ಲಾರಿಗಳ ಮುಖಾಮುಖಿ ಢಿಕ್ಕಿ ಒರ್ವ ಸಾವು: ಲಾರಿಗಳು ನಜ್ಜುಗಜ್ಜು! ಈ ದೃಶ್ಯ ನೋಡಿ | Janata news
ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಗ್ರಾಮಾಂತರ ಪೋಲಿಸ್ ಠಾಣಾ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ7 ರ ದೇವಸ್ಥಾನ ಹೊಸಹಳ್ಳಿ ಗೇಟ್ ಬಳಿ ಎರಡು ಲಾರಿಗಳು ಮುಖಾಮುಖಿ ಢಿಕ್ಕಿ ಹೊಡೆದುಕೊಂಡ ಪರಿಣಾಮ ಒಬ್ಬ ಸ್ಥಳದಲ್ಲೇ ಮೃತಪಟ್ಟು ಇಬ್ಬರು ಗಾಯಗೊಂಡಿರುವ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ.
ಭೀಕರ ಅಪಘಾತದ ದೃಶ್ಯ ಕಂಡ ಜನತೆ ಬೆಚ್ಚಿಬಿದ್ದಿದ್ದಾರೆ. ಲಾರಿಯ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಶವಗಳು ನೇತಾಡುತ್ತಿದ್ದವು. ದುರ್ಘಟನೆಯಲ್ಲಿ ಮೃತಪಟ್ಟವನ ಶವವನ್ನು ಕ್ರೇನ್ ಮೂಲಕ ಹೊರ ತೆಗೆಯಲಾಗಿದೆ.
ಸ್ಥಳದಲ್ಲೇ ಇಬ್ಬರು ದುರ್ಮರಣಕ್ಕೀಡಾಗಿದ್ದಾರೆ. ಮತ್ತೊಬ್ಬನ ಸ್ಥಿತಿ ಚಿಂತಾಜನಕವಾಗಿದೆ. ಅಪಘಾತದಲ್ಲಿ ಸಾವಿಗೀಡಾದವರನ್ನು ಉತ್ತರ ಪ್ರದೇಶದ ಪ್ರಯಾಗ್ ಮೂಲದ ಮಹಮದ್ ಆಲಿ ಮತ್ತು ಮಹಮದ್ ರಿಯಾನ್ ಎಂದು ಗುರುತಿಸಲಾಗಿದೆ.
ಘಟನಾ ಸ್ಥಳಕ್ಕೆ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಿದ್ದಾರೆ ಎಂದು ಜಿಲ್ಲಾ ಎಸ್ಪಿ ಮಿಥುನ್ ಕುಮಾರ್ ತಿಳಿಸಿದ್ದಾರೆ.