ರಸ್ತೆ ಗುಂಡಿ ತಪ್ಪಿಸಲು ಹೋಗಿ ಬೈಕ್ ನಿಂದ ಬಿದ್ದು ಸ್ಥಳದಲ್ಲೇ ಶಿಕ್ಷಕನ ಸಾವು! | Janata news
ಚಾಮರಾಜನಗರ : ರಸ್ತೆ ಗುಂಡಿ ತಪ್ಪಿಸಲು ಹೋಗಿ ಆಯ ತಪ್ಪಿ ಬಿದ್ದು ಶಿಕ್ಷಕ ಮೃತಪಟ್ಟಿರುವ ಘಟನೆ ಕೊಳ್ಳೇಗಾಲದ ಸಿದ್ದಯ್ಯನಪುರ ಮುಖ್ಯ ರಸ್ತೆಯಲ್ಲಿ ನಡೆದಿದೆ.
ಮಧುವನಹಳ್ಳಿ ನಿವಾಸಿ ಮಹದೇವಶೆಟ್ಟಿ(57) ಮೃತ ಶಿಕ್ಷಕ. ಇವರು ಹನೂರು ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದರು.
ಕೊಳ್ಳೇಗಾಲ ಪಟ್ಟಣದ ಮಾರ್ಗವಾಗಿ ಬೈಕ್ನಲ್ಲಿ ತೆರಳುತ್ತಿದ್ದ ಮಧುವನಹಳ್ಳಿ ಗ್ರಾಮದ ಶಿಕ್ಷಕ ಮಹದೇವಶೆಟ್ಟಿ ಬೈಕ್ನಿಂದ ಬಿದ್ದಿದ್ದಾರೆ. ಹೆಲ್ಮೆಟ್ ಧರಿಸದಿರುವುದರ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಕೊಳ್ಳೇಗಾಲ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
English summary :Chamarajanagara