ಸಕಲ ಸರ್ಕಾರಿ ಗೌರವಗಳೊಂದಿಗೆ ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ SPB ಅಂತಿಮ ವಿಧಿವಿಧಾನ! | Janata news
ಚೆನ್ನೈ: : ತಮಿಳು ನಾಡಿನ ತಿರುವಳ್ಳೂರ್ ಜಿಲ್ಲೆಯ ತಾಮರೈಪಾಕಂ ಎಂಬಲ್ಲಿರುವ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ರೆಡ್ ಹಿಲ್ಸ್ ಫಾರ್ಮ್ ಹೌಸ್ ನಲ್ಲಿ ಅವರ ಅಂತಿಮ ಯಾತ್ರೆಯ ವಿಧಿ ವಿಧಾನ ಕಾರ್ಯಗಳು, ಧಾರ್ಮಿಕ ಸಂಪ್ರದಾಯಗಳು ನೆರವೇರುತ್ತಿವೆ. ಸಂಪೂರ್ಣ ಪೊಲೀಸ್ ಗೌರವದೊಂದಿಗೆ ಸಾಗುತ್ತಿದೆ. ಈ ಮೂಲಕ ಗಾನ ಗಂಗೆಯಲ್ಲಿ ಸ್ವರಮಾಂತ್ರಿಕ ಲೀನವಾಗಿದ್ದಾರೆ.
ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ಅಂತಿಮ ವಿಧಿವಿಧಾನ ನಡೆಯಲಿದೆ. ಎಸ್ ಪಿಬಿಯವರ ಪುತ್ರ ಹಿನ್ನೆಲೆ ಗಾಯಕ ಎಸ್ ಪಿ ಚರಣ್ ತಂದೆಯ ಅಂತಿಮ ಯಾತ್ರೆಯ ವಿಧಿ ವಿಧಾನಗಳನ್ನು ಶೈವ ಸಂಪ್ರದಾಯದಂತೆ ಕುಟುಂಬದ ಇತರ ಸದಸ್ಯರ ಸಮ್ಮುಖದಲ್ಲಿ ನೆರವೇರಿಸುತ್ತಿದ್ದಾರೆ.
ಈ ಮೂಲಕ ಗಾನ ಗಂಧರ್ವ ಬಾರದ ಲೋಕಕ್ಕೆ ತೆರಳಿದ್ದಾರೆ. ಆದ್ರೇ ಅವರು ಹಾಡಿದ 40 ಸಾವಿರಕ್ಕೂ ಹೆಚ್ಚು ಹಾಡುಗಳ ಮೂಲಕ ಇನ್ನೂ ನಮ್ಮೊಂದಿಗೆ ಜೀವಂತರಾಗಿದ್ದಾರೆ.